ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಭಾರೀ ಮಳೆಗೆ ಸೂರತ್‍ನಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು 7 ಮಂದಿ ಸಾವು

ಸೂರತ್‍ನಲ್ಲಿ ಭಾರೀ ಮಳೆಯಿಂದ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು 7 ಜನ ಸಾವಿಗೀಡಾಗಿದ್ದಾರೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರ ರಕ್ಷಣೆಗೆ ಎನ್‍ಡಿಆರ್‌ಎಫ್‌ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಶನಿವಾರ ಮಹಿಳೆಯೊಬ್ಬರನ್ನು ಅವಶೇಷಗಳ ಅಡಿಯಿಂದ ರಕ್ಷಿಸಲಾಗಿತ್ತು. ಈ ದುರ್ಘಟನೆಯಲ್ಲಿ ಸುಮಾರು 15 ಮಂದಿ ಗಾಯಗೊಂಡಿದ್ದಾರೆ. ಜನರ ರಕ್ಷಣೆಗಾಗಿ ಎನ್‍ಡಿಆರ್‍ಎಫ್ ಸಿಬ್ಬಂದಿ ರಾತ್ರಿಯಿಡೀ ಕಾರ್ಯ ನಿರ್ವಹಿಸಿದ್ದಾರೆ.

ಕುಸಿದು ಬಿದ್ದ ಕಟ್ಟಡದಲ್ಲಿ ಐದು ಕುಟುಂಬಗಳು ವಾಸವಾಗಿದ್ದವು. ಇದನ್ನು 2017 ರಲ್ಲಿ ನಿರ್ಮಿಸಲಾಗಿತ್ತು. ಈ ದುರ್ಘಟನೆ ವೇಳೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಅನೇಕರು ಕಟ್ಟಡದ ಒಳಗೆ ಮಲಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

8 ವರ್ಷಗಳ ಹಿಂದಷ್ಟೇ ನಿರ್ಮಾಣವಾಗಿದ್ದ ಈ ಕಟ್ಟಡ ಬಹುತೇಕ ಶಿಥಿಲಾವಸ್ಥೆಯಲ್ಲಿತ್ತು. ಕಳೆದ ಕೆಲವು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕಟ್ಟಡ ಕುಸಿದಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

kiniudupi@rediffmail.com

No Comments

Leave A Comment