ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ನವೆ೦ಬರ್ 7ರ ಶುಕ್ರವಾರದ೦ದು ಜರಗಲಿದೆ. ವನಪೂಜೆ,ಮಧ್ಯಾಹ್ನ ಪೂಜೆ,ವನಭೋಜನ,ರಾತ್ರಿಪೂಜೆ, ಕೆರೆಉತ್ಸವದೊ೦ದಿಗೆ ಪೇಟೆ ಉತ್ಸವದೊ೦ದಿಗೆ ಕಟ್ಟೆ ಪೂಜೆ,ರಾತ್ರಿ ಬೀಡಿನಗುಡ್ಡೆಯಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

ಬೆಂಗಳೂರು: ಎಂಜಿ ರಸ್ತೆಯಲ್ಲಿ BMTC ಬಸ್’ಗೆ ಆಕಸ್ಮಿಕ ಬೆಂಕಿ, ತಪ್ಪಿದ ಅನಾಹುತ

ಬೆಂಗಳೂರು: ಬೆಳ್ಳಂಬೆಳಗ್ಗೆಯೇ ಬಿಎಂಟಿಸಿ ಬಸ್​ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಗರದ ಎಂ.ಜಿ.ರಸ್ತೆಯಲ್ಲಿ ಮಂಗಳವಾರ ನಡೆದಿದೆ.

ಅನಿಲ್ ಕುಂಬ್ಳೆ ಜಂಕ್ಷನ್ ಹತ್ತಿರ ನಡೆದ ಘಟನೆ ನಡೆದಿದೆ. ಬಸ್ ನಲ್ಲಿ ಜನರಿದ್ದು, ಬೆಂಕಿ ಕಾಣಿಸಿಕೊಂಡತೆ ಎಚ್ಚೆತ್ತ ನಿರ್ವಾಹಕ ಅವರನ್ನು ಕೆಳಕ್ಕಿಳಿಸಿದ್ದಾರೆ.

ಘಟನೆ ವೇಳೆ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

ಈ ಘಟನೆಯಿಂದಾಗಿ, ಎಂಜಿ ರಸ್ತೆಯ ಸದಾ ದಟ್ಟ ವಾಹನನಿಬಿಡ ಸ್ಥಳವಾದ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಟ್ರಾಫಿಕ್‌ ಅಸ್ತವ್ಯಸ್ತವಾಯಿತು. ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್‌ನಿಂದ ಮೇಲೆದ್ದ ಭಾರಿ ಪ್ರಮಾಣದ ಹೊಗೆ ಪಕ್ಕದಲ್ಲಿದ್ದ ಮೆಟ್ರೋ ನಿಲ್ದಾಣವನ್ನು ಸಹ ಆವರಿಸಿತು

No Comments

Leave A Comment