ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಮೂಡಿಗೆರೆ: ನಿಷೇಧಿತ ಪ್ರೆದೇಶದ ಜಲಪಾತದಲ್ಲಿ ಮೋಜು ಮಸ್ತಿ – ಚಡ್ಡಿಯಲ್ಲೇ ಓಡಿಸಿದ ಪೊಲೀಸರು

ಮೂಡಿಗೆರೆ : ಜಿಲ್ಲಾಡಳಿತ ನಿಷೇಧಿತ ಪ್ರೆದೇಶ ಎಂದು ಘೋಷಿಸಿದ್ದ ಜಲಪಾತದಲ್ಲಿ ಮೋಜು ಮಸ್ತಿಯಲ್ಲಿ ನಿರತರಾಗಿದ್ದ ಯುವಕರನ್ನು ಪೊಲೀಸರು ಚಡ್ಡಿಯಲ್ಲಿ ಓಡಿಸಿದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಫಾಲ್ಸ್ ಬಳಿ ನಡೆದಿದೆ.

ನಿಷೇಧಿತ ಪ್ರದೇಶದಲ್ಲಿ ಬಂಡೆ ಹತ್ತಿ ಹುಚ್ಚಾಟ ತೋರುತ್ತಿದ್ದ ಪ್ರವಾಸಿಗರಿಗೆ ಬಿಸಿ ಮುಟ್ಟಿಸಿದ ಬಣಕಲ್ ಗಸ್ತು ಪೊಲೀಸರು ಯುವಕರ ಬಟ್ಟೆಗಳನ್ನು ತಂದು ಗಸ್ತು ವಾಹನಕ್ಕೆ ತುಂಬಿ ಶಾಕ್ ನೀಡಿದ್ದಾರೆ. ಪೊಲೀಸರ ಹಿಂದೆ ಚಡ್ಡಿಯಲ್ಲೇ ಓಡಿ ಬಂದ ಯುವಕರು ಪ್ಲೀಸ್ ಸರ್, ಇನ್ನೊಂದ್ ಸಲ ಹೀಗೆ ಮಾಡುವುದಿಲ್ಲ, ದಯವಿಟ್ಟು ಬಟ್ಟೆ ಕೊಡಿ ಎಂದು ಅಂಗಲಾಚಿದ್ದಾರೆ.

ಆ ಬಳಿಕ ಪ್ರವಾಸಿ ಯುವಕರು ಬಟ್ಟೆ ಕೊಡುವಂತೆ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಕೊನೆಗೆ ಪೊಲೀಸರು ಎಚ್ಚರಿಕೆ ಕೊಟ್ಬ ಬಳಿಕ ಬಟ್ಟೆಗಳನ್ನು ಕೊಟ್ಟು ಕಳುಹಿಸಿದ್ದಾರೆ.

No Comments

Leave A Comment