ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಮೂಡಿಗೆರೆ : ಜಿಲ್ಲಾಡಳಿತ ನಿಷೇಧಿತ ಪ್ರೆದೇಶ ಎಂದು ಘೋಷಿಸಿದ್ದ ಜಲಪಾತದಲ್ಲಿ ಮೋಜು ಮಸ್ತಿಯಲ್ಲಿ ನಿರತರಾಗಿದ್ದ ಯುವಕರನ್ನು ಪೊಲೀಸರು ಚಡ್ಡಿಯಲ್ಲಿ ಓಡಿಸಿದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಫಾಲ್ಸ್ ಬಳಿ ನಡೆದಿದೆ.
ನಿಷೇಧಿತ ಪ್ರದೇಶದಲ್ಲಿ ಬಂಡೆ ಹತ್ತಿ ಹುಚ್ಚಾಟ ತೋರುತ್ತಿದ್ದ ಪ್ರವಾಸಿಗರಿಗೆ ಬಿಸಿ ಮುಟ್ಟಿಸಿದ ಬಣಕಲ್ ಗಸ್ತು ಪೊಲೀಸರು ಯುವಕರ ಬಟ್ಟೆಗಳನ್ನು ತಂದು ಗಸ್ತು ವಾಹನಕ್ಕೆ ತುಂಬಿ ಶಾಕ್ ನೀಡಿದ್ದಾರೆ. ಪೊಲೀಸರ ಹಿಂದೆ ಚಡ್ಡಿಯಲ್ಲೇ ಓಡಿ ಬಂದ ಯುವಕರು ಪ್ಲೀಸ್ ಸರ್, ಇನ್ನೊಂದ್ ಸಲ ಹೀಗೆ ಮಾಡುವುದಿಲ್ಲ, ದಯವಿಟ್ಟು ಬಟ್ಟೆ ಕೊಡಿ ಎಂದು ಅಂಗಲಾಚಿದ್ದಾರೆ.
ಆ ಬಳಿಕ ಪ್ರವಾಸಿ ಯುವಕರು ಬಟ್ಟೆ ಕೊಡುವಂತೆ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಕೊನೆಗೆ ಪೊಲೀಸರು ಎಚ್ಚರಿಕೆ ಕೊಟ್ಬ ಬಳಿಕ ಬಟ್ಟೆಗಳನ್ನು ಕೊಟ್ಟು ಕಳುಹಿಸಿದ್ದಾರೆ.