
ವಾಲ್ಮೀಕಿ ನಿಗಮ ಹಗರಣ: ರಾಜ್ಯ, ಕೇಂದ್ರ ತನಿಖಾ ಸಂಸ್ಥೆಗಳ ನಡುವೆ ಶೀತಲ ಸಮರ
ಬೆಂಗಳೂರು, ಜುಲೈ 12: ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ ನಾಗೇಂದ್ರರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ವಾಲ್ಮೀಕಿ ನಿಗಮದ ಹಗರಣ ಪ್ರಕರಣ, ಕೇಂದ್ರ ವರ್ಸಸ್ ರಾಜ್ಯ ಸರ್ಕಾರವಾಗಿ ಬದಲಾಗಿದೆಯಾ ಎಂಬ ಅನುಮಾನ ಮೂಡಿದೆ. ಇದಕ್ಕೆ ಕಾರಣ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ನಡೆ.
ಇ.ಡಿ ಕಣ್ಣು ತಪ್ಪಿಸಿ ಎಸ್ಐಟಿ ಮುಂದೆ ಹಾಜರಾಗಿರುವ ದದ್ದಲ್
ಇ.ಡಿ ಕಣ್ಣು ತಪ್ಪಿಸಿ ಶಾಸಕ ದದ್ದಲ್ ಎಸ್ಐಟಿ ಮುಂದೆ ಹಾಜರಾಗಿದ್ದು, ‘ನನ್ನನ್ನು ಬಂಧಿಸಿ’ ಎಂದು ಮನವಿ ಮಾಡಿದ್ದಾರೆ. ಎಸ್ಐಟಿ ಅಧಿಕಾರಿ ಡಿವೈಎಸ್ಪಿ ಶ್ರಿನಿವಾಸ್ ಮುಂದೆ ಬಂಧಿಸುವಂತೆ ಕೇಳಿಕೊಂಡಿದ್ದಾರೆ. ಎಸ್ಐಟಿ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಈ ಮಧ್ಯೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಇ.ಡಿ ದಾಳಿ ಮುಗಿದ ಬೆನ್ನಲ್ಲೇ ಎಸ್ಐಟಿ ಮುಂದೆ ಹಾಜರಾಗಿರುವ ದದ್ದಲ್ ಅರೆಸ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.
ಇಡಿ ಬಲೆಯಲ್ಲಿ ನಾಗೇಂದ್ರ; ಬಳ್ಳಾರಿಯಲ್ಲಿರೋ ಆಪ್ತರಿಗೆ ನಡುಕ
ಮಾಜಿ ಸಚಿವ ನಾಗೇಂದ್ರ ಇಡಿ ವಶದಲ್ಲಿದ್ದು, ಇಡಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಇದೀಗ ಬಳ್ಳಾರಿಯಲ್ಲಿರುವ ನಾಗೇಂದ್ರ ಆಪ್ತರಿಗೆ ಢವಢವ ಶುರುವಾಗಿದೆ. ಯಾವುದೇ ಕ್ಷಣದಲ್ಲಿ ನಾಗೇಂದ್ರ ಆಪ್ತರನ್ನ ಇಡಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಈಗಾಗಲೇ ನಾಗೇಂದ್ರ ಪಿಎ ಚೇತನ್ ಮತ್ತು ಮಾಧ್ಯಮ ಸಲಹೆಗಾರ ಸೇರಿದಂತೆ ಐವರಿಗೆ ನೋಟಿಸ್ ನೀಡಲಾಗಿದ್ದು ಅವರಿಗೂ ಈಗ ಭೀತಿ ಶುರುವಾಗಿದೆ.
ನಾಗೇಂದ್ರರ ಬಳ್ಳಾರಿ ನಿವಾಸದಲ್ಲಿ ಮಹತ್ವದ ದಾಖಲೆ ಜಪ್ತಿ