ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ – ನದಿ ತೀರದ ಜನರಿಗೆ ಎಚ್ಚರಿಕೆ

ಬಂಟ್ವಾಳ:ಜು 13ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನೀರಿನ‌ ಪ್ರಮಾಣ ಕೊಂಚ ಹೆಚ್ಚಳವಾಗಿದ್ದು, ಸದ್ಯಕ್ಕೆ ನೀರಿನ ಮಟ್ಟ 6.1ಮೀ.ನಷ್ಟಿದೆ. ನೇತ್ರಾವತಿ ನದಿಯಲ್ಲಿ 8 ಮೀ. ಅಪಾಯಕಾರಿ ಮಟ್ಟವಾಗಿದ್ದು, 8.5ಮೀ. ತಲುಪಿದರೆ ಪಾಣೆಮಂಗಳೂರಿನ ಆಲಡ್ಕ ಭಾಗದಲ್ಲಿ ಪ್ರವಾಹದ ನೀರು ಮನೆಯೊಳಗೆ ನುಗ್ಗುತ್ತದೆ.

ಮಲೆನಾಡು ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿರುವ ಪರಿಣಾಮ ನೀರಿನ ಮಟ್ಟ ಹೆಚ್ಚಳಗೊಂಡಿದೆ. ತುಂಬೆ ಡ್ಯಾಮ್‌ನ ಎಲ್ಲಾ ಗೇಟ್‌ಗಳನ್ನು ತೆರವು ಮಾಡಿದರೆ ನೀರು ತೀರಾ ಇಳಿಕೆಯಾಗುವ ಸಾಧ್ಯತೆಯೂ ಇದೆ. ಉಪ್ಪಿನಂಗಡಿಯ ನದಿ ನೀರಿನ ಮಟ್ಟದಲ್ಲೂ ಹೆಚ್ಚಳಗೊಂಡಿರುವ ಕಾರಣ ನದಿ ತೀರದ ನಿವಾಸಿಗಳು ಬಹಳ ಎಚ್ಚರಿಕೆಯಿಂದ ಇರಬೇಕಾಗಿದೆ. ಅನಾವಶ್ಯಕವಾಗಿ ನದಿ ತೀರಕ್ಕೆ ತೆರಳುವುದು ಅಥವಾ ನೀರಿಗೆ ಇಳಿಯುವುದು ಸರಿಯಲ್ಲ ಎಂದು ಇಲಾಖೆ ಸೂಚಿಸಿದೆ.

ಅಧಿಕಾರಿಗಳು ನದಿ ತೀರಕ್ಕೆ ತೆರಳಿ ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದಾರೆ.

No Comments

Leave A Comment