ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಕಳರಿ ಸಮರ ಕಲೆಯನ್ನು ಶಾಲೆಗಳಲ್ಲೂ ಕಲಿಸಿ: ಪದ್ಮಶ್ರೀ ಮೀನಾಕ್ಷಿ ಅಮ್ಮ
ಉಡುಪಿ: ಕಳರಿ ಸಮರ ಕಲೆಯನ್ನು ಮಕ್ಕಳಿಗೆ ಅಗತ್ಯವಾಗಿ ಕಲಿಸ ಬೇಕು. ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ತಮ್ಮ ಆತ್ಮರಕ್ಷಣೆಗಾಗಿ ಈ ಕಲೆಯನ್ನು ಅಭ್ಯಸಿಸಬೇಕು. ಇದರಿಂದ ಹೆಣ್ಣು ಮಕ್ಕಳ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸಧೃಡರಾಗುತ್ತಾರೆ. ಆದುದರಿಂದ ಈ ಕಲೆಯನ್ನು ಕರಾಟೆಯಂತೆ ಶಾಲೆಗಳಲ್ಲಿಯೂ ಕಲಿಸುವ ಕಾರ್ಯ ನಡೆಸಬೇಕು ಎಂದು ಪದ್ಮಶ್ರೀ ಪುರಸ್ಕೃತ ಕಳರಿಪಟು ಮೀನಾಕ್ಷಿ ಅಮ್ಮ ಹೇಳಿದ್ದಾರೆ.
ಶ್ರೀಕೃಷ್ಣ ಸೇವಾ ಬಳಗದ ಆಶ್ರಯದಲ್ಲಿ ಶನಿವಾರ ಉಡುಪಿ ಶ್ರೀಪೂರ್ಣ ಪ್ರಜ್ಞ ಸಭಾಂಗಣದಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.
ಕಳರಿ ಕಲೆಯನ್ನು ನಾಲ್ಕು ಹಂತದಲ್ಲಿ ಕಲಿಯಬೇಕಾಗುತ್ತದೆ. ಮೊದಲು ವ್ಯಾಯಮಾ, ನಂತರ ಕೋಲು, ಬಳಿಕ ಆಯುಧ ಕೊನೆಯದಾಗಿ ಬರೀ ಕೈಯಲ್ಲಿ ಎದುರಾಳಿಯನ್ನು ಎದುರಿಸುವ ಬಗ್ಗೆ ಕಲಿಯಬೇಕು. ಮೊದಲು ಈ ಕಲೆಯನ್ನು ಕರಗತ ಮಾಡಿಕೊಳ್ಳಲು 13ವರ್ಷಗಳು ಬೇಕಾಗಿರುತ್ತಿತ್ತು. ಈಗ ಮಕ್ಕಳು ತುಂಬಾ ಬೇಗನೆ ಕಲಿಯುತ್ತಿದ್ದಾರೆ. ಕೇವಲ ಆತ್ಮರಕ್ಷಣೆ ಕಲೆಯನ್ನು ಕರಗತ ಮಾಡಿಕೊಳ್ಳಲು 13ವರ್ಷಗಳು ಬೇಕಾಗಿರುತ್ತಿತ್ತು.
ಈಗ ಮಕ್ಕಳು ತುಂಬಾ ಬೇಗನೆ ಕಲಿಯುತ್ತಿದ್ದಾರೆ. ಕೇವಲ ಆತ್ಮರಕ್ಷಣೆ ಮಾತ್ರವಲ್ಲದೆ ದೇಹಕ್ಕೆ ಆರೋಗ್ಯ ಮತ್ತು ಮಾನಸಿಕ ಧೈರ್ಯ ಈ ಕಲೆಯನ್ನು ಎಲ್ಲ ವಯಸ್ಕರು ಕಲಿಯಬೇಕಾಗಿದೆ ಎಂದರು.
ಅಧ್ಯಕ್ಷತೆಯನ್ನು ಅದಮಾರು ಮಠಾಧೀಶ ಶ್ರೀಈಶಪ್ರಿಯತೀರ್ಥ ಸ್ವಾಮೀಜಿ ವಹಿಸಿದ್ದರು.
ಗುರುಪುರ ವಜ್ರದೇಹಿ ಮಠದ ಶ್ರೀರಾಜಶೇಖರಾನಂದ ಸ್ವಾಮೀಜಿ, ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಶ್ರೀಯೋಗಾನಂದ ಸರಸ್ವತಿ ಸ್ವಾಮೀಜಿ, ಮಾಣಿಲ ಶ್ರೀಧಾಮದ ಶ್ರೀಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಉದ್ಯಮಿ ಇನ್ನಾ ರಾಮದಾಸ ಮಡುಮಣ್ಣಾ ಅವರನ್ನು ಗೌರವಿಸಲಾಯಿತು. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉಪಸ್ಥಿತರಿದ್ದರು. ಶ್ರೀಕಾಂತ ಶೆಟ್ಟಿ ಕಾರ್ಕಳ ತೌಳವ ಸಮರ ಪರಂಪರೆಯ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಬಳಿಕ ಕಳರಿಪಟು ಮೀನಾಕ್ಷಿ ಅಮ್ಮ ಅವರಿಂದ ಕಳರಿಪಯಟ್ಟು ಕುರಿತು ಪ್ರಾತ್ಯಕ್ಷಿಕೆ ಯೊಂದಿಗೆ ದಿನೇಶನ್ ಕಣ್ಣೂರುಮತ್ತು ಬಳಗದಿಂದ ಕಳರಿಪಯಟ್ಟು ಪ್ರದರ್ಶನ ನಡೆಯಿತು. ಡಾ.ರಾಘವೇಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.