ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಲೋಕಸಭೆಯಲ್ಲಿ ಕಾಂಗ್ರೆಸ್ ಉಪ ನಾಯಕರಾಗಿ ಗೌರವ್ ಗೊಗೊಯ್ ನೇಮಕ
ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ ಉಪ ನಾಯಕರಾಗಿ ಗೌರವ್ ಗೊಗೊಯ್ ಅವರನ್ನು ನೇಮಿಸಲಾಗಿದೆ.
ಈ ಸಂಬಂಧ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಪ ನಾಯಕ, ಮುಖ್ಯ ಸಚೇತಕ ಮತ್ತು ಇಬ್ಬರು ವಿಪ್ಗಳನ್ನು ನೇಮಿಸುವ ಕುರಿತು ಮಾಹಿತಿ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಗೊಗೊಯ್ ಲೋಕಸಭೆಯಲ್ಲಿ ಪಕ್ಷದ ಉಪ ನಾಯಕರಾಗಿದ್ದರೆ, ಕೇರಳದಿಂದ ಎಂಟು ಬಾರಿ ಸಂಸದರಾಗಿರುವ ಕೋಡಿಕುನ್ನಿಲ್ ಸುರೇಶ್ ಪಕ್ಷದ ಮುಖ್ಯ ಸಚೇತಕರಾಗಿರುತ್ತಾರೆ. ವಿರುದುನಗರ ಸಂಸದ ಮಾಣಿಕ್ಕಂ ಟ್ಯಾಗೋರ್ ಮತ್ತು ಕಿಶನ್ಗಂಜ್ ಸಂಸದ ಮೊಹಮ್ಮದ್ ಜಾವೇದ್ ಲೋಕಸಭೆಯಲ್ಲಿ ಪಕ್ಷದ ವಿಪ್ ಆಗಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಹಿಂದೆ ಪಕ್ಷವು ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕ ಎಂದು ಹೆಸರಿಸಿದ ನಂತರ ಅವರನ್ನು ಆ ಸ್ಥಾನಕ್ಕೆ ನೇಮಿಸಲಾಯಿತು. ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಮತ್ತು India ಮೈತ್ರಿಕೂಟ ಪಕ್ಷಗಳು ಲೋಕಸಭೆಯಲ್ಲಿ ಜನರ ಸಮಸ್ಯೆಗಳಿಗೆ ಶಕ್ತಿಯುತವಾಗಿ ಹೋರಾಡುತ್ತವೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.