ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಸೀಟು ಕೊಡುವ ನೆಪದಲ್ಲಿ ಪಕ್ಕದಲ್ಲಿ ಕೂರಿಸಿಕೊಂಡು ಬಾಲಕಿಗೆ ಲೈಂಗಿಕ ಕಿರುಕುಳ: ವ್ಯಕ್ತಿಗೆ ಸಾರ್ವಜನಿಕ ಥಳಿತ

ಮಂಗಳೂರು: ಬಸ್​ನಲ್ಲಿ ಸೀಟು ಕೊಡುವ ನೆಪದಲ್ಲಿ ಬಾಲಕಿಯೊಬ್ಬಳನ್ನು ಪಕ್ಕದಲ್ಲಿ ಕೂರಿಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಗೆ ಬಸ್ ನಲ್ಲೇ ಸಾರ್ವಜನಿಕರು ಥಳಿಸುರವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆ.ಎಸ್​ಆರ್​ಟಿಸಿ ಬಸ್​ನಲ್ಲಿ ಘಟನೆ ನಡೆದಿದ್ದು, ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬನಿಗೆ ಬಸ್​ನಲ್ಲಿದ್ದ ಮಹಿಳೆಯರೇ ಧರ್ಮದೇಟು ಕೊಟ್ಟಿದ್ದಾರೆ.

ಮೂಲಗಳ ಪ್ರಕಾರ ಸೀಟು ಬಿಟ್ಟುಕೊಡುವ ನೆಪದಲ್ಲಿ ಬಾಲಕಿಯನ್ನು ಪಕ್ಕದಲ್ಲಿ ಕೂರಿಸಿಕೊಂಡ ಈ ಆಸಾಮಿ ಬಾಲಕಿ ಮೇಲೆ ಅಸಭ್ಯವಾಗಿ ಕೈಹಾಕಿದ್ದಾನೆ.

ಆರೋಪಿಯು ತನ್ನ ಕೃತ್ಯವನ್ನು ಮುಂದುವರಿಸುತ್ತಿದ್ದಂತೆ ಬಾಲಕಿ ಜಾಗೃತಳಾಗಿ ಮನೆ ಮಂದಿಗೆ ತಿಳಿಸಿದ್ದು, ತಕ್ಷಣ ಆಕೆಯ ತಾಯಿ ಹಾಗೂ ಬಸ್​ನಲ್ಲಿದ್ದ ಇತರ ಮಹಿಳೆಯರು ಮುಖ- ಮೂತಿ ನೋಡದೇ ಹಿಗ್ಗಾಮುಗ್ಗಾ ಬಾರಿಸಿದ್ದಾರೆ.

ಅಸಭ್ಯ ವರ್ತನೆ ಗುರುತಿಸಿದ ಪುಟ್ಟ ಬಾಲಕಿ

ಈ ವ್ಯಕ್ತಿಯು ಕುಟುಂಬವೊಂದರ ಜತೆ ಪ್ರಯಾಣ ಮಾಡುತ್ತಿದ್ದ ಬಾಲಕಿಯನ್ನು ಸೀಟು ಕೊಡುವ ನೆಪದಲ್ಲಿ ಹತ್ತಿರ ಕೂರಿಸಿಕೊಂಡಿದ್ದ. ಬಳಿಕ ತನ್ನ ದುರ್ಬುದ್ಧಿ ತೋರಿದ ಆತ ಬಾಲಕಿಯ ತೊಡೆ ಮೇಲೆ ಕೈಯಿಟ್ಟು ಅಸಭ್ಯವಾಗಿ ವರ್ತಿಸಿದ್ದ. ಬಳಿಕ ಆಕೆಯ ಮೈಯೆಲ್ಲ ಕೈಯಾಡಿಸಲು ಶುರುಮಾಡಿದ್ದ. ಕಿರುಕುಳದ ಕುರಿತು ಅರಿವು ಹೊಂದಿದ್ದ ಆಕೆ ತಕ್ಷಣವೇ ಪೋಷಕರಿಗೆ ಮಾಹಿತಿ ನೀಡಿದ್ದಾಳೆ.

ಎಚ್ಚೆತ್ತುಕೊಂಡ ಆಕೆಯ ತಾಯಿ ಹಾಗೂ ಬಸ್​ನಲ್ಲಿದ್ದ ಇತರೆ ಮಹಿಳೆಯರು ಆತನನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಮೊದಲು ಆರೋಪ ಅಲ್ಲಗಳೆದ ಆರೋಪಿ ಬಳಿಕ ಇನ್ನು ಮುಂದೆ ಆ ರೀತಿ ಮಾಡಲ್ಲ ಎಂದು ತಪ್ಪೊಪ್ಪಿಕೊಂಡಿದ್ದಾನೆ.

ಆತನ ತಪ್ಪೊಪ್ಪಿಗೆ ಹೇಳತ್ತಿದ್ದಂತೆ ಜಾಗೃತರಾದ ಉಳಿದ ಮಹಿಳೆಯರೆಲ್ಲರೂ ಆತನ ಟೊಪ್ಪಿ ಹಾರಿ ಹೋಗುವಂತೆ ಬಡಿದಿದ್ದಾರೆ. ಕೈಯಿಂದಲೇ ಹಲ್ಲೆ ಮಾಡಿ ಆತನ ಚಳಿ ಬಿಡಿಸಿದ್ದಾರೆ. ಬಸ್​​ನಲ್ಲಿದ್ದ ಇತರರು ಈ ದೃಶ್ಯದ ವಿಡಿಯೊ ಮಾಡಿದ್ದು, ಈ ವಿಡಿಯೊ ವೈರಲ್ ಆಗಿದೆ.

CT ರವಿ ಕಿಡಿ

ಬಿಜೆಪಿ ನಾಯಕ ಸಿ.ಟಿ ರವಿ ಕೂಡ ಈ ವಿಡಿಯೋವನ್ನು ಟ್ವೀಟ್ ಮಾಡಿ ಆಸಾಮಿಯ ದುರ್ನಡತೆಯನ್ನು ಖಂಡಿಸಿದ್ದಾರೆ.

”ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಅತಿಯಾದ ಓಲೈಕೆ ರಾಜಕಾರಣದ ಪರಿಣಾಮ ಇದೇ ನೋಡಿ. ಬಸ್ಸುಗಳಲ್ಲಿ ನಮ್ಮ ಸಹೋದರಿಯರು ನಿರ್ಭೀತಿಯಿಂದ ಸಹ ಸಂಚರಿಸಲಾಗದಷ್ಟರ ಮಟ್ಟಿಗೆ ಕಾನೂನು ಸುವ್ಯವಸ್ಥೆ ಹದಗೆಟ್ಟು ಹಳ್ಳ ಹಿಡಿದಿದೆ. ಅಪರಾಧಿಗಳಿಗೆ ಕಾನೂನಿನ ಭಯವೇ ಇಲ್ಲದಂತಾಗಿರುವುದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಅತಿಯಾದ ತುಷ್ಟೀಕರಣ ರಾಜಕಾರಣವೇ ಇದಕ್ಕೆ ಕಾರಣ” ಎಂದು ಟ್ವೀಟ್ ಮಾಡಿದ್ದಾರೆ.

kiniudupi@rediffmail.com

No Comments

Leave A Comment