ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಉಡುಪಿ: ಭಾರಿ ಮಳೆಗೆ ಒಂದು ವರ್ಷದ ಹಿಂದೆ ನಿರ್ಮಿಸಿದ ಸೇತುವೆ ಕುಸಿತ; ಗ್ರಾಮಸ್ಥರು ಕಂಗಾಲು
ಉಡುಪಿ, ಜು.16: ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಭಾರಿ ಮಳೆಗೆ ಒಂದು ವರ್ಷದ ಹಿಂದೆ 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಸೇತುವೆವೊಂದುಕುಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಭರಣಕೊಳ್ಕಿಯಲ್ಲಿ ನಡೆದಿದೆ.
ಹಾಲಾಡಿ, ಜೋರಾಡಿ, ಮುದ್ದೂರು ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದ್ದು, ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ದಿನನಿತ್ಯದ ಕೆಲಸಕ್ಕೆ ತೆರಳಲು ಗ್ರಾಮಸ್ಥರು ಇದೇ ಸೇತುವೆಯನ್ನ ಅವಲಂಭಿಸಿದ್ದರು. ಇದೀಗ ಕಳಪೆ ಕಾಮಗಾರಿಯಿಂದ ಸೇತುವೆ ಕುಸಿತ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.