Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಉಡುಪಿ: ಭಾರಿ ಮಳೆಗೆ ಒಂದು ವರ್ಷದ ಹಿಂದೆ ನಿರ್ಮಿಸಿದ ಸೇತುವೆ ಕುಸಿತ; ಗ್ರಾಮಸ್ಥರು ಕಂಗಾಲು

ಉಡುಪಿ, ಜು.16: ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಭಾರಿ ಮಳೆಗೆ ಒಂದು ವರ್ಷದ ಹಿಂದೆ 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಸೇತುವೆವೊಂದು ಕುಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ  ತಾಲೂಕಿನ ಭರಣಕೊಳ್ಕಿಯಲ್ಲಿ ನಡೆದಿದೆ.

ಹಾಲಾಡಿ, ಜೋರಾಡಿ, ಮುದ್ದೂರು ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದ್ದು, ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ದಿನನಿತ್ಯದ ಕೆಲಸಕ್ಕೆ ತೆರಳಲು ಗ್ರಾಮಸ್ಥರು ಇದೇ ಸೇತುವೆಯನ್ನ ಅವಲಂಭಿಸಿದ್ದರು. ಇದೀಗ ಕಳಪೆ ಕಾಮಗಾರಿಯಿಂದ ಸೇತುವೆ ಕುಸಿತ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

No Comments

Leave A Comment