ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ತಗ್ಗಿದರೂ ಗುಡ್ಡ ಕುಸಿತದ ಆತಂಕ ತಪ್ಪಿಲ್ಲ. ಗೋಕರ್ಣದಲ್ಲಿ ಬೆಳ್ಳಂಬೆಳಿಗ್ಗೆ ಗುಡ್ಡ ಕುಸಿದಿದೆ.
ಗೋಕರ್ಣ ಮುಖ್ಯಕಡಲತೀರದ ರಾಮಮಂದಿರ ಬಳಿ ಗುಡ್ಡ ಕುಸಿತವಾಗಿದೆ. ಮಂದಿರದಲ್ಲಿ ಯಾರು ಇಲ್ಲದ ಕಾರಣ ಅನಾಹುತ ನಡೆದಿಲ್ಲ. ಗುಡ್ಡದ ಕಲ್ಲುಗಳು ದೇವಾಲಯದ ಗೋಡೆತನಕ ಉರುಳಿ ಬಂದು ನಿಂತಿವೆ. ಹೆಚ್ಚಿನ ಅನಾಹುತವಾಗಿಲ್ಲ. ಅವ್ಯಾಹತವಾಗಿ ನಡೆಯುತ್ತಿರುವ ಕಲ್ಲುಗಣಿಗಾರಿಕೆಯಿಂದ ಗುಡ್ಡ ಕುಸಿದ ಆರೋಪವನ್ನು ಜನತೆ ಮಾಡುತ್ತಿದ್ದಾರೆ.ಮಳೆ ಕಡಿಮೆಯಾದರೂ ನಿಲ್ಲದ
ಗುಡ್ಡ ಕುಸಿತ ದಿಂದ ಜಿಲ್ಲೆಯ ಜನರಲ್ಲಿ ಭಯ ಹೆಚ್ಚಾಗಿದೆ.
ಗೋಕರ್ಣದ ಗುಡ್ಡ ಕುಸಿತದಿಂದರಾಮಮಂದಿರ ದೇವಸ್ಥಾನಕ್ಕೆ ಯಾವುದೇ ಹಾನಿ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.