ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಆಷಾಢ ಏಕಾದಶಿ ವಿವಿದೆಡೆಯಲ್ಲಿ ತಪ್ತಮುದ್ರಾಧಾರಣೆ
ಉಡುಪಿ:ಇ೦ದು ಆಷಾಢ ಏಕಾದಶಿ ವಿವಿದೆಡೆಯಲ್ಲಿ ತಪ್ತಮುದ್ರಾಧಾರಣೆಯು ನೆರವೇರಿತು. ಬೆಂಗಳೂರಿನ ಗೋವರ್ಧನ ಕ್ಷೇತ್ರ ಶ್ರೀ ಪುತ್ತಿಗೆ ಮಠದಲ್ಲಿ ಪರಮಪೂಜ್ಯ ಅದಮಾರು ಮಠದ ಹಿರಿಯ ಶ್ರೀಪಾದರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೇಪಾದರಿಂದ ನೆರೆದ ಭಕ್ತರಿಗೆ ತಪ್ತಮುದ್ರಾಧಾರಣೆ ನಡೆಯಿತು .ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ,ಉಡುಪಿಯಲ್ಲಿ ಬುಧವಾರ ಬೆಳಿಗ್ಗೆ ಘಂಟೆ 08.00 ರಿಂದ ತಪ್ತ ಮುದ್ರಾಧಾರಣೆ ನಡೆಯಿತು . ಆಬಾಲವೃದ್ಧರಾದಿಯಾಗಿ ಸಾವಿರಾರು ಮಂದಿ ಭಕ್ತರು, ಪೂಜ್ಯ ಪರ್ಯಾಯ ಮಠಾಧೀಶರಿಂದ ಮುದ್ರೆಯನ್ನು ಹಾಕಿಸಿ ಕೊಂಡು ಧನ್ಯರಾದರು.