ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆಗೆ ಯತ್ನ: 1.7 ಕೋಟಿ ರೂ. ಮೌಲ್ಯದ ಚಿನ್ನ ವಶಕ್ಕೆ, 3 ಬಂಧನ
ಬೆಂಗಳೂರು: ಕಳ್ಳ ಸಾಗಾಣಿಕೆಯಲ್ಲಿ ಚಿನ್ನಾಭರಣ ಸಾಗಿಸಲು ಯತ್ನಿಸಿದ ಮೂವರು ವಿದೇಶಿಗರನ್ನು ಬಂಧಿಸಿ 2.44 ಕೆಜಿ ಚಿನ್ನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಥಾಯ್ಲೆಂಡ್ ದೇಶದ ಬ್ಯಾಂಕಾಂಕ್ ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 3 ವಿದೇಶಿಗರಿಂದ ರೂ.1.71 ಕೋಟಿ ಮೌಲ್ಯದ 2.44 ಕೆಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ.
ವಿದೇಶದಿಂದ ರಿಂಗ್ ಗಳಿಗೆ ಕಚ್ಚಾ ಬಂಗಾರವನ್ನು ಅಡಗಿಸಿಕೊಂಡು ಅಖ್ರಮವಾಗಿ ಸಾಗಿಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೆಐಎಗೆ ಬ್ಯಾಂಕಾಂಕ್ ನಿಂದ ಥಾಯ್ ಏರ್ ಲೈಸ್ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕರನ್ನು ಪರೀಕ್ಷಿಸಿದಾಗ ಸಿಕ್ಕಿಬಿದ್ದಿದ್ದಾರೆ.