ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಶಿರೂರು ಗುಡ್ಡ ಕುಸಿತ ಪ್ರಕರಣ:5 ವರ್ಷದ ಬಾಲಕಿಯ ಮೃತದೇಹ ಪತ್ತೆ
ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರೂರು ಕ್ಯಾಂಟೀನ್ ಮಾಲೀಕನ ಐದು ವರ್ಷದ ಮಗಳ ಮೃತದೇಹ ಪತ್ತೆಯಾಗಿದೆ.
ಆವಂತಿಕ (5) ಮೃತ ಬಾಲಕಿ. ಗಂಗಾವಳಿ ನದಿಯಲ್ಲಿ ತೇಲಿ ಹೋಗಿ ಗೋಕರ್ಣ ಬ್ರಿಡ್ಜ್ ಬಳಿ ಆವಂತಿಕ ಮೃತದೇಹ ಪತ್ತೆಯಾಗಿದೆ. ಒಟ್ಟು ಆರು ಜನ ಮೃತಪಟ್ಟಿರುವ ಮಾಹಿತಿಯಿದೆ.
ಸದ್ಯ ಈಗ ಐದು ಜನರ ಮೃತದೇಹ ಸಿಕ್ಕಿದೆ. ಕ್ಯಾಂಟೀನ್ ಮಾಲೀಕನ ಮಗಳು ಆವಂತಿಕಾ ಮೃತದೇಹ ಪತ್ತೆಯಾಗಿದೆ. ಮತ್ತೊಂದು ಕಡೆ ರಸ್ತೆ ಮೇಲಿನ ಗುಡ್ಡ ತೆರವು ಕಾರ್ಯ ಸಹ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡ್ಡ ಕುಸಿದು 20ಕ್ಕೂ ಹೆಚ್ಚು ಜನರು ಮೃತ ಆಗಿರುವ ಬಗ್ಗೆ ಶಂಕೆ ವ್ಯಕ್ತ ಆಗುವುದರ ಜೊತೆಗೆ ಇನ್ನಷ್ಟು ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಈ ಹಿನ್ನೆಲೆ ಘಟನಾ ಸ್ಥಳಕ್ಕೆ ತಜ್ಞರು ಭೇಟಿ ನೀಡಲಿದ್ದಾರೆ. ಜಿಯೋಗ್ರಾಫಿಕಲ್ ಸರ್ವೇ ಆಫ್ ಇಂಡಿಯಾ ತಜ್ಞ ಸಂಜೀವ್ ಎಂಬವರು ಭೂಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.