ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಪ್ಪಿನಂಗಡಿ: ಐರಾವತ ಬಸ್ ನಲ್ಲಿ ಆಕಸ್ಮಿಕ ಬೆಂಕಿ – ಸ್ಥಳೀಯ ಯುವಕರ ಕಾರ್ಯಾಚರಣೆ ಯಿಂದ ತಪ್ಪಿದ ದೊಡ್ಡ ದುರಂ

ಉಪ್ಪಿನಂಗಡಿ: ಕೆಎಸ್ಆರ್ ಟಿಸಿ ಐರಾವತ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು ತಕ್ಷಣ ಸ್ಥಳೀಯ ಯುವಕರ ಕಾರ್ಯಾಚರಣೆಯಿಂದ ಬೆಂಕಿ ಆರಿಸಲಾಗಿದ್ದು ಹೆಚ್ಚಿನ ಅನಾಹುತ ತಪ್ಪಿಸಿದ ಘಟನೆ ಉಪ್ಪಿನಂಗಡಿ ಹಳೆಗೇಟು ಬಳಿ ಜು.18ರ ಗುರುವಾರ ಬೆಳಗ್ಗೆ ನಡೆದಿದೆ.

ಬೆಂಗಳೂರಿನಿಂದ – ಮಂಗಳೂರಿಗೆ ಹೋಗುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದರು. ಕೊಡಲೇ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ತಕ್ಷಣ ಅಲ್ಲಿದ್ದ ಇಸಾಕ್, ಇಕ್ಬಾಲ್ , ಜಾಯಿ, ಝಕಾರಿಯಾ, ಸಿದ್ದೀಕ್ ಸೇರಿದಂತೆ ಅಟೋ ಚಾಲಕರು ರಸ್ತೆಯಲ್ಲಿದ್ದ ಕೆಸರು, ಮಣ್ಣು, ನೀರನ್ನು ಬಸ್ಸಿಗೆ ಎರಚಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

ಬಸ್ಸಿನ ಹಿಂಬದಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

No Comments

Leave A Comment