ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ....ಚಿತ್ತಾಪುರದಲ್ಲಿ RSS ಪಥ ಸಂಚಲನ: ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕ ನಿಗದಿಪಡಿಸುವಂತೆ ಹೈಕೋರ್ಟ್ ಆದೇಶ

ಶ್ರೀಗಂಧ ಕಳ್ಳ ಸಾಗಣೆ: 2 ಕೋಟಿ ರೂ.ಮೌಲ್ಯದ ಮರ ವಶಕ್ಕೆ, ಆರೋಪಿಗಳ ಬಂಧನ

ಬೆಂಗಳೂರು: ರಾಜ್ಯ ಅರಣ್ಯ ವಿಚಕ್ಷಣಾ ದಳದ ಪೊಲೀಸರು ಕೆಆರ್ ಪುರಂ ಬಳಿಯ ಗೋದಾಮಿನ ಮೇಲೆ ದಾಳಿ ನಡೆಸಿದ್ದು, 2 ಕೋಟಿ ರೂಪಾಯಿ ಮೌಲ್ಯದ ಶ್ರೀಗಂಧವನ್ನು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಕೆಆರ್ ಪುರಂ ಬಳಿಯ ಐಟಿಐ ಕಾರ್ಖಾನೆಯ ಗೋದಾಮಿನ ಮೇಲೆ ದಾಳಿ ನಡೆಸಿದ್ದರು.

ದಾಳಿ ವೇಳೆ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 2 ಕೋಟಿ ರೂಪಾಯಿ ಮೌಲ್ಯದ 50 ಕ್ಕೂ ಹೆಚ್ಚು ಶ್ರೀಗಂಧ ಮರದ ತುಂಡುಗಳನ್ನು ಪತ್ತೆ ಮಾಡಿದ್ದಾರೆ. ಬಳಿಕ ಆರೋಪಿಗಳನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

No Comments

Leave A Comment