ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ನಾನು ಪ್ರಚಾರಕ್ಕೆ ಮಾತಾಡಲ್ಲ: ಪರಿಹಾರ ಈಗಾಗಲೇ ವಿತರಿಸಿದ್ದೇವೆ : ಕೃಷ್ಣ ಭೈರೇಗೌಡ

ಕಾರವಾರ: ಉಳುವರೆ ಗ್ರಾಮಸ್ಥರಿಗೆ ಬದಲಿ ಜಾಗ ಕೊಟ್ಟು ,ಮನೆ ಕಟ್ಟಿಕೊಡ್ತೇವೆ. ಜನ ಸಹಕಾರ ಮಾಡಬೇಕು. ಬದಲಿ ಮನೆಗೆ ಸ್ಥಳಾಂತರ ಆದ ಮೇಲೆ ಮೂಲ ಮನೆಯಲ್ಲಿ ವಾಸ ಮಾಡಬಾರದು ಎಂದು ಕಂದಾಯ ಸಚಿವ ಕೃಷ್ಣಾ ಭೈರೇಗೌಡ ಹೇಳಿದರು.

ಅವರು ಶಿರೂರು ಗುಡ್ಡ ಕುಸಿತ ಪ್ರದೇಶದ ಬಳಿ ವೀಕ್ಷಣೆ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು.

ಕುಮಾರಸ್ವಾಮಿ ಪುಡಿಗಾಸು ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ. ಅವರು ರಾಷ್ಟ್ರೀಯ ಹೆದ್ದಾರಿ ಸರಿಪಡಿಸುವ ಕೆಲಸ ಮಾಡಲಿ.‌ನಮ್ಮ ಕೆಲಸ ನಾವು ಮಾಡ್ತೇವೆ‌. ಈ ಹೆದ್ದಾರಿ ನಿರಂತರ ಕುಸಿಯುವ ಕೆಸರು ಪ್ರದೇಶ ಎಂದು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ವರದಿ ನೀಡಿದೆ. ಈ ವರದಿಯನ್ನು ಕೇಂದ್ರ ಸರಕಾರಕ್ಕೆ ನೀಡುತ್ತೇವೆ ಎಂದರು.

ಕುಸಿಯುವ ಗುಡ್ಡದ ಮಧ್ಯೆ ಎನ್ ಡಿಆರ್ ಎಫ್, ಎಸ್ ಡಿ ಆರ್ ಎಫ್ ಕೆಲಸ ಮಾಡುತ್ತಿದೆ. ಜೆಸಿಬಿ, ಹಿಟಾಚಿ ಬಳಸಿ ಮಣ್ಣು ತೆಗೆಯುವ ಕೆಲಸ ಮಾಡುತ್ತಿದ್ದೇವೆ ಅಲ್ಲದೆ ಮೃತರಿಗೆ ಘಟನೆ ನಡೆದ ಸಂಜೆ ಅದೇ ದಿನ ೫ ಲಕ್ಷ ಪರಿಹಾರ ವಿತರಿಸಲಾಗಿದೆ. ಬಲೆ ಬೋಟ್ ಕಳೆದು ಕೊಂಡ ೫೯ ಕುಟುಂಬಕ್ಕೆ ೧೪ ಲಕ್ಷ ರೂ. ಪರಿಹಾರ ವಿತರಿಸಲಾಗಿದೆ ಎಂದರು

No Comments

Leave A Comment