ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಮಂಗಳೂರಿನಲ್ಲಿ ಮಳೆ- ಗಾಳಿ ಅವಾಂತರ: ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಸಾವು

ಮಂಗಳೂರು: ಕರಾವಳಿಯಲ್ಲಿ ಮಳೆಯ ಅವಾಂತರ ಮುಂದುವರಿದಿದೆ ಭಾರಿ ಗಾಳಿ ಮಳೆಗೆ ಮನೆ ಕುಸಿದು ಬಾಲಕ ಮೃತಪಟ್ಟಿರುವ ಘಟನೆ ದ.ಕ. ಜಿಲ್ಲೆಯ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ನಡೆದಿದೆ. ಮೃತ ಬಾಲಕನ್ನು ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಎಂದು ಗುರುತಿಸಲಾಗಿದೆ.

ಭಾರಿ ಗಾಳಿ-ಮಳೆಗೆ ಮನೆಯ ಮೇಲೆ ತಡೆಗೋಡೆ ಕುಸಿದು ಈ ದುರಂತ ಸಂಭವಿಸಿದೆ. ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿಯಾಗಿರುವ ಶೈಲೇಶ್ ಕುಸಿತವಾದ ಮನೆಗೆ ಅತಿಥಿಯಾಗಿ ಬಂದಿದ್ದ. ಬುಧವಾರ ರಾತ್ರಿ ಮಂಗಳೂರು ಭಾಗದಲ್ಲಿ ಭಾರಿ ಮಳೆಯಾಗಿತ್ತು.

ಈ ಹಿನ್ನಲೆಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿದು ಬಿದ್ದಿದೆ. ಪರಿಣಾಮ ಮನೆ ಸಂಪೂರ್ಣ ಕುಸಿದಿದೆ. ಮಣ್ಣಿನಡಿ ಸಿಲುಕಿ ಶೈಲೇಶ್ ಸ್ಥಳದಲ್ಲೇ‌ ಮೃತಪಟ್ಟಿದ್ದಾರೆ. ಐವರು ಗಾಯಗೊಂಡಿದ್ದಾರೆ. ಪಾಂಡೇಶ್ವರ ಮತ್ತು ಕದ್ರಿ ಅಗ್ನಿ ಶಾಮಕ‌ದಳ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದ್ದಾರೆ. ಅಪಾಯದಲ್ಲಿದ್ದ ನಾಲ್ವರನ್ನು ರಕ್ಷಿಸಲಾಗಿದೆ.

kiniudupi@rediffmail.com

No Comments

Leave A Comment