ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ತಮಿಳುನಾಡು: ಎಐಎಡಿಎಂಕೆ ಕಾರ್ಯಕರ್ತನ ಬರ್ಬರ ಹತ್ಯೆ

ತಮಿಳುನಾಡಿನ ಕಡಲೂರಿನಲ್ಲಿ ಪಳನಿಸ್ವಾಮಿ ಪಕ್ಷದ ಎಐಎಡಿಎಂಕೆ ಕಾರ್ಯಕರ್ತನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪುದುಚೇರಿ ಗಡಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ತಿರುಪಾಪುಲಿಯೂರಿನ ನಿವಾಸಿ ಪದ್ಮನಾಭನ್ ಎಂದು ಗುರುತಿಸಲಾಗಿದ್ದು, ಇವರು ಅಂಗಡಿ ನಡೆಸುತ್ತಿದ್ದರು.

ಅವರು ಬಾಗೂರು ಗ್ರಾಮದ ಕಡೆಗೆ ಪ್ರಯಾಣಿಸುತ್ತಿದ್ದಾಗ ಅಪರಿಚಿತರ ಗುಂಪೊಂದು ಹಿಂಬಾಲಿಸಿ ಅವರನ್ನು ಸುತ್ತುವರೆದಿದೆ. ಕೆಲವೇ ಕ್ಷಣಗಳಲ್ಲಿ ಅವರು ಕೊಲ್ಲಲ್ಪಟ್ಟರು. ಆರಂಭಿಕ ವರದಿಗಳ ಪ್ರಕಾರ ಗ್ಯಾಂಗ್ ತಮ್ಮ ಕಾರನ್ನು ಪದ್ಮನಾಭನ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿತ್ತು. ಆದರೆ ಹತ್ಯೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ.

ಬಳಿಕ ಅವರನ್ನು ಹೊರಗೆಳೆದು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

No Comments

Leave A Comment