ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ತಮಿಳುನಾಡು: ಎಐಎಡಿಎಂಕೆ ಕಾರ್ಯಕರ್ತನ ಬರ್ಬರ ಹತ್ಯೆ
ತಮಿಳುನಾಡಿನ ಕಡಲೂರಿನಲ್ಲಿ ಪಳನಿಸ್ವಾಮಿ ಪಕ್ಷದ ಎಐಎಡಿಎಂಕೆ ಕಾರ್ಯಕರ್ತನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪುದುಚೇರಿ ಗಡಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ತಿರುಪಾಪುಲಿಯೂರಿನ ನಿವಾಸಿ ಪದ್ಮನಾಭನ್ ಎಂದು ಗುರುತಿಸಲಾಗಿದ್ದು, ಇವರು ಅಂಗಡಿ ನಡೆಸುತ್ತಿದ್ದರು.
ಅವರು ಬಾಗೂರು ಗ್ರಾಮದ ಕಡೆಗೆ ಪ್ರಯಾಣಿಸುತ್ತಿದ್ದಾಗ ಅಪರಿಚಿತರ ಗುಂಪೊಂದು ಹಿಂಬಾಲಿಸಿ ಅವರನ್ನು ಸುತ್ತುವರೆದಿದೆ. ಕೆಲವೇ ಕ್ಷಣಗಳಲ್ಲಿ ಅವರು ಕೊಲ್ಲಲ್ಪಟ್ಟರು. ಆರಂಭಿಕ ವರದಿಗಳ ಪ್ರಕಾರ ಗ್ಯಾಂಗ್ ತಮ್ಮ ಕಾರನ್ನು ಪದ್ಮನಾಭನ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿತ್ತು. ಆದರೆ ಹತ್ಯೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ.
ಬಳಿಕ ಅವರನ್ನು ಹೊರಗೆಳೆದು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.