ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
Tirupati Laddu: ವಿಶ್ವ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದಕ್ಕೆ 309 ವರ್ಷಗಳ ಸಂಭ್ರಮ, ಇದರ ವಿಶೇಷತೆಗಳೇನು?
ವಿಶ್ವದ ಶ್ರೀಮಂತ ದೇವಸ್ಥಾನ ಎನ್ನುವ ಹೆಗ್ಗಳಿಕೆಗೆ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಪಾತ್ರವಾಗಿದ್ದು ವರ್ಷದಿಂದ ವರ್ಷಕ್ಕೆ ಈ ದೇವಸ್ಥಾನದ ಆದಾಯ ಹೆಚ್ಚಾಗುತ್ತಿದೆ. ಇಲ್ಲಿನ ದೇವರು ಎಷ್ಟು ಪ್ರಸಿದ್ದವೋ ಈ ದೇವಸ್ಥಾನದಲ್ಲಿ ನೀಡುವ ಲಡ್ಡು ಕೂಡ ಅಷ್ಟೇ ಪ್ರಸಿದ್ದ.
ಹಾಗಾಗಿ, ಪ್ರಸಿದ್ಧ ತಿರುಪತಿ ವೆಂಕಟೇಶ್ವರ ದೇವಾಲಯದ ‘ತಿರುಪತಿ ಲಡ್ಡು’ ಪ್ರಸಾದ ನೆನೆದರೆ ಭಕ್ತಿಯ ಜೊತೆಗೆ ಬಾಯಲ್ಲಿ ನೀರು ಬರುತ್ತದೆ. ತುಪ್ಪ ಮತ್ತು ಏಲಕ್ಕಿ ಆಸ್ವಾದ ಹೊಂದಿರುವ ಈ ಲಡ್ಡು ವಿಶ್ವ ಪ್ರಸಿದ್ಧ. ಈಗ ಈ ಪವಿತ್ರ ಪ್ರಸಾದಕ್ಕೆ 309 ವರ್ಷ. ಇದನ್ನು ಮೊದಲ ಬಾರಿಗೆ 1715ರ ಆಗಸ್ಟ್ 2 ರಂದು ಪ್ರಾರಂಭಿಸಲಾಯಿತು.
ನಂಬಿಕೆಗಳ ಪ್ರಕಾರ ಇಲ್ಲಿನ ಪ್ರಸಾದ ಸ್ವೀಕರಿಸದೆ ತಿರುಪತಿ ದೇವಸ್ಥಾನ ಯಾತ್ರೆ ಸಂಪೂರ್ಣವಾಗುವುದಿಲ್ಲ ಎನ್ನಲಾಗುತ್ತದೆ. ಹಾಗಾಗಿ ಇಲ್ಲಿಗೆ ಬಂದ ಭಕ್ತರು ಲಡ್ಡು ಪ್ರಸಾದ ಸ್ವೀಕರಿಸದೆಯೇ ಮನೆಗೆ ತೆರಳುವುದಿಲ್ಲ.
ಇಲ್ಲಿ ನಡೆಯುವ ಬ್ರಹ್ಮೋತ್ಸವದ ಸಮಯದಲ್ಲಿ ಈ ಲಡ್ಡಿಗೆ ಅಪಾರ ಬೇಡಿಕೆಯಿರುತ್ತದಂತೆ. ಇಲ್ಲಿ ಪ್ರತಿನಿತ್ಯ 270 ಜನ ಬಾಣಸಿಗರು ಸೇರಿದಂತೆ 620 ಜನ ಲಡ್ಡು ತಯಾರಿಕಾ ಘಟಕದಲ್ಲಿ ಕೆಲಸ ಮಾಡುತ್ತಾರೆ ಎಂದು ಇಲ್ಲಿನ ಅಧಿಕಾರಿಗಳು ಹೇಳುತ್ತಾರೆ.