ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಮಲ್ಪೆ:ಪಿ. ರಾಧಾಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ
ಉಡುಪಿ: ಜಿ .ಎಸ್. ಬಿ ಸಮಾಜ ಮಲ್ಪೆಯ ಶ್ರೀ ರಾಮ ಮಂದಿರ ಆಡಳಿತ ಮಂಡಳಿಯ ಸದಸ್ಯರಾಗಿದ್ದ ಪಿ. ರಾಧಾಕೃಷ್ಣ ಶೆಣೈಯವರು ಅವರು ಇಂದು ಸೋಮವಾರದ೦ದು ಹೃದಯಾಘಾತದಿಂದ ದೈವಾಧೀನರಾಗಿದ್ದಾರೆ. ಸದಾ ನಗುಮೊಗದಿಂದ ಅತ್ಯಂತ ಸರಳ ಸ್ವಭಾವ, ಆತ್ಮೀಯತೆಯಿಂದ ಮಾತನಾಡಿಸುತ್ತಿದ್ದರು.
ಇವರ ಆಗಲುವಿಕೆಯ ದುಃಖ ನೀಗುವ ಶಕ್ತಿಯನ್ನು ಭಗವಂತನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಸಮಸ್ತ ಜಿ ಎಸ್ ಬಿ ಸಮಾಜ ಬಾ೦ಧವರು, ಶ್ರೀರಾಮಮ೦ದಿರದ ಆಡಳಿತ ಮ೦ಡಳಿಯ ಸರ್ವಸದಸ್ಯರು ಸ೦ತಾಪವನ್ನು ಸೂಚಿಸಿದ್ದಾರೆ.