``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ನೆಲಮಂಗಲ: ಲಾರಿಗೆ ಬೈಕ್ ಡಿಕ್ಕಿ; ಗರ್ಭಿಣಿ ಹೊಟ್ಟೆಯಿಂದ ಹೊರ ಬಂದ ಮಗು ವಿಲವಿಲ ಒದ್ದಾಡಿ ಸಾವು

ಬೆಂಗಳೂರು: ಬೆಂಗಳೂರಿನ ಹೊರವಲಯ ನೆಲಮಂಗಲದ ಬಳಿ ನಡೆದ ಘೋರ ಅಪಘಾತದಲ್ಲಿ, ಟಿಪ್ಪರ್‌ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಬಲಿಯಾಗಿದ್ದಾರೆ. ಹೊಟ್ಟೆಯಲ್ಲಿದ್ದ 8 ತಿಂಗಳ ಮಗು ಹೊರಬಂದು ಸಾವಿಗೀಡಾಗಿದೆ.

ಮೃತ ಮಹಿಳೆಯನ್ನು ಎಡೇಹಳ್ಳಿ ಗ್ರಾಮದ ಸಿಂಚನ (30) ಎಂದು ಗುರುತಿಸಲಾಗಿದೆ. ಪತಿ ಮಂಜುನಾಥ್ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿ ಘೋರ ದುರಂತ ಸಂಭವಿಸಿದೆ. ಬೈಕ್‌ನಲ್ಲಿ ಹೋಗುತ್ತಿದ್ದ ದಂಪತಿಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿದೆ. 8 ತಿಂಗಳ ಗರ್ಭಿಣಿ ಮಹಿಳೆ ಸಾವನ್ನಪ್ಪಿದ್ದಾರೆ. ಟಿಪ್ಪರ್ ಮೈಮೇಲೆ ಹರಿದ ಪರಿಣಾಮ ಹೊಟ್ಟೆಯಲ್ಲಿದ್ದ ಮಗು ಕೂಡ ಹೊರಗೆ ಬಂದು ಅಸುನೀಗಿದೆ. ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಿಂಚನಾಗೆ ಬರುವ ಆಗಸ್ಟ್​ 17ಕ್ಕೆ 8 ಮುಗಿದು 9 ತಿಂಗಳು ತುಂಬುತ್ತಿತ್ತು. ಹೀಗಾಗಿ ಹೆರಿಗೆ ಸುಸೂತ್ರವಾಗಿ ಆಗಲಿ ಎಂದು ದಂಪತಿ ಬೈಕ್ ನಲ್ಲಿ​​ ದಾಬಸ್​ ಪೇಟೆಯಲ್ಲಿರುವ ಶಿವಗಂಗೆಯ ಗಣಪತಿ ದೇವಸ್ಥಾನಕ್ಕೆ ತೆರಳಿದ್ದರು. ಪೂಜೆ ಸಲ್ಲಿಸಿ ಮರಳಿ ತಮ್ಮೂರು ತೋಟನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟಿಪ್ಪರ್​ ಡಿಕ್ಕಿ ಹೊಡೆದಿದೆ. ಆಗ ಸಿಂಚನಾ ಬೈಕ್ ನಿಂದ ಕೆಳಗೆ ಬಿದ್ದಿದ್ದಾರೆ. ಬಳಿಕ ಟಿಪ್ಪರ್ ​ಸಿಂಚನಾ ಮೇಲೆ ಹರಿದ ಪರಿಣಾಮ ಹೊಟ್ಟೆಯಲ್ಲಿದ್ದ 8 ತಿಂಗಳು ಮಗು ಹೊರಗೆ ಬಂದಿದೆ. ನಡು ರಸ್ತೆಯಲ್ಲೇ ಮಗು ವಿಲ ವಿಲ ಒದ್ದಾಡಿ ಮೃತಪಟ್ಟಿದೆ.

No Comments

Leave A Comment