ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಸುಳ್ಯ: ಭಾರೀ ಮಳೆಗೆ ಡಾಮಾರು ರಸ್ತೆ ಕುಸಿತ; ವಾಹನ ಸಂಚಾರ ಅಸ್ತವ್ಯಸ್ತ
ಭಾರೀ ಮಳೆಗೆ ಡಾಮಾರು ರಸ್ತೆ ಕುಸಿತಗೊಂಡು, ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿರುವ ಘಟನೆ ಸುಳ್ಯ ತಾಲೂಕಿನ ನೆಟ್ಟಾರಿನಲ್ಲಿ ಕಂಡುಬಂದಿದೆ.
ಇತ್ತೀಚೆಗೆ ಸುರಿದ ಭಾರೀ ಮಳೆಗೆ ರಸ್ತೆಯಲ್ಲಿ ಕುಸಿತ ಉಂಟಾಗಿ ಡಾಮರು ಕಿತ್ತು ಹೋಗಿದೆ. ಇದರಿಂದಾಗಿ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿರುವುದಾಗಿ ಕಂಡುಬಂದಿದೆ. ಕೂಡಲೇ ಹದಗೆಟ್ಟ ರಸ್ತೆ ದುರಸ್ತಿಗೊಳಿಸಬೇಕು ಎಂದು ಸ್ಥಳೀಯ ನಾಗರಿಕರು ಹಾಗೂ ವಾಹನ ಸವಾರರು ಆಗ್ರಹಿಸಿದ್ದಾರೆ.