ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನಕ್ಕೆ ರಾಷ್ಟ್ರೀಯ ಸಹಕಾರಿ ನೀತಿ ಆಯೋಗದ ಅಧ್ಯಕ್ಷ ಸುರೇಶ್ ಪಿ ಪ್ರಭು ಭೇಟಿ
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 124ನೇ ಭಜನಾ ಸಪ್ತಾಹ ಮಹೋತ್ಸವದ 2ನೇ ದಿನವಾದ ಭಾನುವಾರದ೦ದು ಮಾಜಿ ಕೇಂದ್ರ ಸಚಿವರು ಹಾಗೂ ಅಧ್ಯಕ್ಷರು, ರಾಷ್ಟ್ರೀಯ ಸಹಕಾರಿ ನೀತಿ ಆಯೋಗ, ಹಾಗೂ ಅಖಿಲ ಭಾರತ್ ಜಿ ಎಸ್ ಬಿ ದೇವಸ್ಥಾನ ಒಕ್ಕೂಟ ಇದರ ಅಧ್ಯಕ್ಷರಾದ ಸುರೇಶ್ ಪಿ ಪ್ರಭು ತಮ್ಮ ಪತ್ನಿ ಸಮೇತರಾಗಿ ಭೇಟಿ ನೀಡಿದರು.ಈ ಸ೦ದರ್ಭದಲ್ಲಿ ದೇವಸ್ಥಾನದ ಆಡಳಿತ ಮ೦ಡಳಿಯ ಮೊಕ್ತೇಸರರಾದ ಪಿ ವಿ.ಶೆಣೈಯವರು ಇವರಿಗೆ ಶಾಲುಹೊದಿಸಿ ಶ್ರೀದೇವರ ಪ್ರಸಾದವನ್ನು ನೀಡಿ ಗೌರವಿಸಿದರು.
ಸ್ಥಳೀಯ ಶಾಸಕರಾದ ಯಶ್ಪಾಲ್ ಎ ಸುವರ್ಣ,ಶ್ರೀನಿವಾಸ ಪ್ರಭು ಉಡುಪಿ.ನಗರಸಭೆಯ ಮಾಜಿ ಸದಸ್ಯರಾದ ಶ್ಯಾಮ್ ಪ್ರಸಾದ್ ಕುಡ್ವ.ಮಟ್ಟಾರು ಸತೀಶ್ ಕಿಣಿ,ದೇವಸ್ಥಾನದ ಮ್ಯಾನೇಜರ್ ಸುರೇಶ್ ಭಟ್,ಕೆ.ಪ್ರಭಾಕರ್ ನಾಯಕ್ ,ಗಣೇಶ್ ಶೆಣೈ ಹಾಗೂ ಸಮಾಜದ ಗಣ್ಯರು ಹಾಜರಿದ್ದರು.