ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನಕ್ಕೆ ರಾಷ್ಟ್ರೀಯ ಸಹಕಾರಿ ನೀತಿ ಆಯೋಗದ ಅಧ್ಯಕ್ಷ ಸುರೇಶ್ ಪಿ ಪ್ರಭು ಭೇಟಿ
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 124ನೇ ಭಜನಾ ಸಪ್ತಾಹ ಮಹೋತ್ಸವದ 2ನೇ ದಿನವಾದ ಭಾನುವಾರದ೦ದು ಮಾಜಿ ಕೇಂದ್ರ ಸಚಿವರು ಹಾಗೂ ಅಧ್ಯಕ್ಷರು, ರಾಷ್ಟ್ರೀಯ ಸಹಕಾರಿ ನೀತಿ ಆಯೋಗ, ಹಾಗೂ ಅಖಿಲ ಭಾರತ್ ಜಿ ಎಸ್ ಬಿ ದೇವಸ್ಥಾನ ಒಕ್ಕೂಟ ಇದರ ಅಧ್ಯಕ್ಷರಾದ ಸುರೇಶ್ ಪಿ ಪ್ರಭು ತಮ್ಮ ಪತ್ನಿ ಸಮೇತರಾಗಿ ಭೇಟಿ ನೀಡಿದರು.ಈ ಸ೦ದರ್ಭದಲ್ಲಿ ದೇವಸ್ಥಾನದ ಆಡಳಿತ ಮ೦ಡಳಿಯ ಮೊಕ್ತೇಸರರಾದ ಪಿ ವಿ.ಶೆಣೈಯವರು ಇವರಿಗೆ ಶಾಲುಹೊದಿಸಿ ಶ್ರೀದೇವರ ಪ್ರಸಾದವನ್ನು ನೀಡಿ ಗೌರವಿಸಿದರು.
ಸ್ಥಳೀಯ ಶಾಸಕರಾದ ಯಶ್ಪಾಲ್ ಎ ಸುವರ್ಣ,ಶ್ರೀನಿವಾಸ ಪ್ರಭು ಉಡುಪಿ.ನಗರಸಭೆಯ ಮಾಜಿ ಸದಸ್ಯರಾದ ಶ್ಯಾಮ್ ಪ್ರಸಾದ್ ಕುಡ್ವ.ಮಟ್ಟಾರು ಸತೀಶ್ ಕಿಣಿ,ದೇವಸ್ಥಾನದ ಮ್ಯಾನೇಜರ್ ಸುರೇಶ್ ಭಟ್,ಕೆ.ಪ್ರಭಾಕರ್ ನಾಯಕ್ ,ಗಣೇಶ್ ಶೆಣೈ ಹಾಗೂ ಸಮಾಜದ ಗಣ್ಯರು ಹಾಜರಿದ್ದರು.