ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಆಭರಣದಂಗಡಿಗೆ ನುಗ್ಗಿ ಗುಂಡಿ ಹಾರಿಸಿದ ಖದೀಮರು; ಮಾಲೀಕ ಸಾವು, ಐವರಿಗೆ ಗಾಯ

ಜೈಪುರ: ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಭಿವಾಡಿ ಪ್ರದೇಶದಲ್ಲಿ ಆಗಸ್ಟ್ 23 ರಂದು ಸಂಜೆ 7 ಗಂಟೆ ಸುಮಾರಿಗೆ ಐವರು ದರೋಡೆಕೋರರು ಆಭರಣ ಅಂಗಡಿಗೆ ನುಗ್ಗಿ ಲೂಟಿ ಮಾಡಿದ್ದಾರೆ. ಕಾರಿನಲ್ಲಿ ಬಂದು ಅಂಗಡಿಯಲ್ಲಿದ್ದವರ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿದ್ದಾರೆ. ಈ ಘಟನೆಯಲ್ಲಿ ಅಂಗಡಿ ಮಾಲೀಕ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಂಗಡಿಯ ಹೊರಗಿದ್ದ ಸೆಕ್ಯುರಿಟಿ ಗಾರ್ಡ್ ನನ್ನು ದೊಣ್ಣೆಯಿಂದ ಹೊಡೆದು ಬಳಿಕ ಆಭರಣ ಮಳಿಗೆಗೆ ನುಗ್ಗಿ ಒಳಗಿದ್ದ ಸಿಬ್ಬಂದಿಗೆ ಮನಬಂದಂತೆ ಥಳಿಸಿದ್ದಾರೆ. ತಡೆಯಲು ಯತ್ನಿಸಿದ ಮಾಲೀಕ ಕಮಲೇಶ್ ಸೋನಿಗೆ ತೀವ್ರವಾಗಿ ಥಳಿಸಿದ್ದಾರೆ. ಅವರ ಪುತ್ರ ವೈಭವ್ ಹಾಗೂ ಶೋರೂಂ ಸಿಬ್ಬಂದಿಯನ್ನು ಥಳಿಸಿ ಕಟ್ಟಿಹಾಕಿದ್ದಾರೆ. ಘಟನೆಯಲ್ಲಿ ಸೆಕ್ಯುರಿಟಿ ಗಾರ್ಡ್ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಬಳಿಕ ದುಷ್ಕರ್ಮಿಗಳು ತಮ್ಮೊಂದಿಗೆ ತಂದಿದ್ದ ಎರಡು ಚೀಲಗಳಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿಯ ಆಭರಣಗಳನ್ನು ದೋಚಿದ್ದಾರೆ. ದರೋಡೆ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

No Comments

Leave A Comment