ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಮುಡಾಸ್ತ್ರಕ್ಕೆ ಕಾಂಗ್ರೆಸ್ ಕೊರೊನಾಸ್ತ್ರ: ಕ್ರಿಮಿನಲ್ ಕೇಸ್​ ದಾಖಲಿಸುವಂತೆ ಶಿಫಾರಸು, ಬಿಜೆಪಿಗರಲ್ಲಿ ಢವಢವ

ಬೆಂಗಳೂರು, ಸೆ,01, :ಮುಡಾ ಪ್ರಕರಣ ಸಿಎಂ‌ ಸಿದ್ದರಾಮಯ್ಯರನ್ನ ನಿದ್ದೆಗೆಡಿಸಿದೆ. ಸದ್ಯ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ವಿರುದ್ಧ ಒಂದು ಕಡೆ ಕಾನೂನು ಸಮರ ನಡೆಯುತ್ತಿದ್ದರೆ, ಅತ್ತ ಬಿಜೆಪಿ ಅವಧಿಯ ಹಗರಣ ಕುರಿತು ಸಿಎಂ ರಾಜಕೀಯ ಹೋರಾಟವನ್ನ ಮುಂದುವರಿಸಿದ್ದಾರೆ. ಹೌದು..ಬಿಜೆಪಿ ಹೂಡಿರುವ ಮುಡಾಸ್ತ್ರಕ್ಕೆ ಕಾಂಗ್ರೆಸ್ ಕೊರೊನಾಸ್ತ್ರ ಹೂಡಿದೆ. ಜಸ್ಟೀಸ್ ಜಾನ್ ಮೈಕೆಲ್ ಕುನ್ಹಾ ನೇತೃತ್ವದ ಆಯೋಗ, ಬಿಜೆಪಿ ಸರ್ಕಾರದಲ್ಲಿ ಕೊರೊನಾ ಹಗರಣದ ವರದಿಯನ್ನು ನಿನ್ನೆ(ಆಗಸ್ಟ್ 31) ಸಿಎಂಗೆ ಸಲ್ಲಿಸಿದೆ. ಒಟ್ಟು 1,722 ಪುಟಗಳ ಕೊರೊನಾ ಹಗರಣದ ರಿಪೋರ್ಟ್ ನೀಡಿದ್ದು, ವರದಿಯಲ್ಲಿ ಕಂಡು ಬಂದ ಅಂಶಗಳು ಈ ಕೆಳಗಿನಂತಿವೆ ನೋಡಿ.

ಮಿನಲ್ ಕೇಸ್​ ದಾಖಲಿಸುವಂತೆ ಶಿಫಾರಸು

ಕೊವಿಡ್​ ಅವಧಿಯಲ್ಲಿನ ಹಣದ ಖರ್ಚು-ವೆಚ್ಚದ ಸಂಪೂರ್ಣ ವರದಿ ಸಿಎಂ ಸಿದ್ದರಾಮಯ್ಯ ಕೈ ಸೇರಿದೆ. ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ಹಾ ನೇತೃತ್ವದಲ್ಲಿ ಸಿಎಂ ಕಾವೇರಿ ನಿವಾಸದಲ್ಲಿ ವರದಿ ಸಲ್ಲಿಸಲಾಗಿದೆ. ಬೃಹತ್ ಗಾತ್ರದ ಬಾಕ್ಸ್ ನಲ್ಲಿ ಒಟ್ಟು 1722ಪುಟಗಳ ಮಧ್ಯಂತರ ವರದಿಯನ್ನ ಸಲ್ಲಿಕೆ ಮಾಡಲಾಗಿದೆ. ಆಯೋಗವು ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಶಿಫಾರಸು ಮಾಡಿದೆ. ಮಧ್ಯಂತರ ವರದಿಯಲ್ಲಿ ಭ್ರಷ್ಟಾಚಾರ ನಡೆದಿರುವುದರ ಬಗ್ಗೆ ಉಲ್ಲೇಖಿಸಲಾಗಿದೆ. ಕೋಟ್ಯಂತರ ರೂ. ಹಣವನ್ನ ದುರುಪಯೋಗಪಡಿಸಿಕೊಳ್ಳಲಾಗಿದೆ.

ಕೆಲಸ ಮಾಡದೆಯೇ ಹಣವನ್ನ ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ಉಲ್ಲೇಖ ಮಾಡಲಾಗಿದೆ. ಕ್ಷೇತ್ರಾವಾರು ಎಷ್ಟೆಷ್ಟು ಹಣ ಖರ್ಚು ಮಾಡಲಾಗಿದೆ ಎಂದು ತೋರಿಸಿದರೂ ಕೆಲಸವೇ ಆಗಿಲ್ಲ ಎಂದು ಉಲ್ಲೇಖಿಸಲಾಗಿದೆ. ಅಕ್ರಮ ಎಸಗಿರುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ.

ವರದಿಯಲ್ಲಿ ಕಂಡು ಬಂದ ಅಂಶಗಳೇನು..?

  • 1754 ಕೋಟಿ ರೂಪಾಯಿ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲಾಗಿಲ್ಲ.

  • ಕೊವಿಡ್​ ಅವದಿಯಲ್ಲಿ ಬಾರಿ ಮೊತ್ತದ ಹಣ ಸೂಕ್ತ ರೀತಿಯಲ್ಲಿ ನಿರ್ವಹಣೆ ಆಗಿಲ್ಲ.

  •  ಹಣ ಖರ್ಚು-ವೆಚ್ಚ ಮಾಡಿರುವ ಬಗ್ಗೆ ಸೂಕ್ತ ದಾಖಲೆ, ಮಾಹಿತಿಯಿಲ್ಲ

  •  ಕೆಲ ಖರೀದಿ ಹಾಗೂ ನಿರ್ವಹಣೆಯಲ್ಲಿ ಹಣ ವಿನಿಯೋಗಿಸದೆ ಬಿಲ್​ ಸೃಷ್ಟಿ ಮಾಡಲಾಗಿದೆ ಎಂದು ವರದಿ

  •  ಹಣ ದುರುಪಯೋಗದ ಸಂಶಯದಲ್ಲಿ ಕ್ರಿಮಿಕಲ್​ ಕೇಸ್​ ದಾಖಲಿಸಿ ತನಿಖೆಗೆ ಶಿಪಾರಸ್ಸು

  • ನ್ಯಾಷಿನಲ್​​ ಹೆಲ್ತ್​ ಮಿಷನ್, ಮೆಡಿಕಲ್​​ ಎಜ್ಯುಕೆಷನ್ ನಿರ್ದೇಶನಾಲಯ, ಬಿಬಿಎಂಪಿ ಕರ್ನಾಟಕ ಮೆಡಿಕಲ್ ಕಾರ್ಫರೆಷನ್ ಸೇರದಂತೆ ಒಟ್ಟು 11 ವಿಭಾಗದಲ್ಲಿ ಹಣ ದುರುಪಯೋಗದ ಬಗ್ಗೆ ಉಲ್ಲೇಖ.

2023ರ ಆಗಸ್ಟ್ 25ರಂದು‌ ರಚನೆಯಾಗಿದ್ದ ಕೋವಿಡ್ ತನಿಖಾ ಆಯೋಗ ರಚನೆ ಮಾಡಲಾಗಿತ್ತು. ಸರ್ಕಾರದಿಂದ ಬಿಡುಗಡೆಯಾದ ಹಣವನ್ನ ಯಾವ ಯಾವ ವಿಭಾಗಗಳು‌‌‌ ಎಷ್ಟು ಖರ್ಚು ಮಾಡಿಕೊಂಡಿದೆ.

11 ವಿಭಾಗಳಿಂದ ಖರ್ಚಾದ ಒಟ್ಟು ಮೊತ್ತದ ವಿವರ

  • ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 1754 ಕೋಟಿ ರೂ.

  • ರಾಷ್ಟ್ರೀಯ ಆರೋಗ್ಯ ಅಭಿಯಾನ 1406 ಕೋಟಿ ರೂ.

  •  ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ 918 ಕೋಟಿ ರೂ.

  •  ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ 1394 ಕೋಟಿ ರೂ. (Medical Requirement)

  •  ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ 569 ಕೋಟಿ ರೂ. (Drugs)

  •  ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ 264 ಕೋಟಿ ರೂ.

  •  ಬಿಬಿಎಂಪಿ ಕೇಂದ್ರ ಕಚೇರಿ 732 ಕೋಟಿ ರೂ.

  •  ಬಿಬಿಎಂಪಿ ದಾಸರಹಳ್ಳಿ ವಲಯ 26 ಕೋಟಿ ರೂ.

  •  ಬಿಬಿಎಂಪಿ ಪೂರ್ವ ವಲಯ 78 ಕೋಟಿ ರೂ.

  •  ಬಿಬಿಎಂಪಿ ಮಹದೇವಪುರ ವಲಯ 48 ಕೋಟಿ ರೂ.

  •  ಬಿಬಿಎಂಪಿ ರಾಜರಾಜೇಶ್ವರಿ ವಲಯದಿಂದ 31 ಕೋಟಿ ರೂ.

ಬಿಜೆಪಿಗರಲ್ಲಿ ಢವಢವ

ಕೋವಿಡ್​ ಹಗರಣದ ಬಗ್ಗೆ ವರದಿ ಸರ್ಕಾರ ಕೈಸೇರಿದ ಬೆನ್ನಲ್ಲೇ ಬಿಜೆಪಿಗರಲ್ಲಿ ಢವಢವ ಶುರುವಾಗಿದೆ. ಕಳೆದ ರಾತ್ರಿ ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ, ಸಚಿವ ಎಂ.ಬಿ ಪಾಟೀಲ್‌, ಡಾ.ಜಿ ಪರಮೇಶ್ವರ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಸಚಿವರು ಸಮಾಲೋಚನೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಗುರುವಾರ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ವರದಿ ಬಹಿರಂಗಗೊಳಿಸುವ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ. ಮಾಜಿ ಸಿಎಂಗಳಾದ ಬಿಎಸ್​ವೈ, ಬೊಮ್ಮಾಯಿ ಮತ್ತು ಮಾಜಿ ಆರೋಗ್ಯ ಸಚಿವ ಡಿ.ಸುಧಾಕರ್​ಗೆ ಟೆನ್ಷನ್​ ಹೆಚ್ಚಾಗಿದೆ.

ಇನ್ನೂ ಬಾಕಿ ಉಳಿದ ಬೆಂಗಳೂರಿನ‌ 4 ವಲಯಗಳು ಹಾಗೂ 31 ಜಿಲ್ಲೆಗಳ ವರದಿಯನ್ನ ಶೀಘ್ರವೇ ಸಲ್ಲಿಕೆ ಮಾಡುವುದಾಗಿ ತಿಳಿಸಲಾಗಿದೆ.‌ ಒಟ್ಟಾರೆ, 1700 ಕೋಟಿ ಅಧಿಕ ಹಣದ ದುರುಪಯೋಗ ಆಗಿದೆ. ಇದರ ವಿರುದ್ಧ ಕಾಂಗ್ರೆಸ್ ಸರ್ಕಾರ ಹೇಗೆ ತನಿಖೆ ನಡೆಸುತ್ತೆ ಎಂದು ಕಾದು ನೋಡ್ಬೇಕಿದೆ.

kiniudupi@rediffmail.com

No Comments

Leave A Comment