ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಕುಂದಾಪುರ: ಸೂಟ್ಕೇಸ್ನಲ್ಲಿ ಇರಿಸಿದ್ದ 4.8 ಲಕ್ಷ ಮೌಲ್ಯದ ಚಿನ್ನಾಭರಣ ಕಳವು
ಕುಂದಾಪುರ: ಸೆ.1 ಮನೆಯಲ್ಲಿ ಸೂಟ್ಕೇಸ್ನಲ್ಲಿ ಇರಿಸಲಾಗಿದ್ದ 100 ಗ್ರಾಂ ತೂಕದ 4.8 ಲಕ್ಷ ಮೌಲ್ಯದ ಮೂರು ಚಿನ್ನದ ಬಳೆಗಳು ಕಳ್ಳತನವಾದ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿದ್ದಾಪುರ ನಿವಾಸಿ ಮರಿಯಮ್ ಶಹರಿನ್ (26) ಅವರು ಈ ಕುರಿತು ದೂರು ದಾಖಲಿಸಿದ್ದಾರೆ. ಆಗಸ್ಟ್ 22 ರಂದು ಗುಲ್ವಾಡಿ ಗ್ರಾಮದ ಶೆಟ್ರಕಟ್ಟೆಯ ಕಲ್ಕಂಬದಲ್ಲಿರುವ ತನ್ನ ಮಾವ ಮಹಮ್ಮದ್ ಖಾಸಿಂ ಅವರ ಮನೆಗೆ ಗೃಹಪ್ರವೇಶ ಮತ್ತು ಮದುವೆಗೆಂದು ತೆರಳಿದ್ದರು. ಆಗಸ್ಟ್ 26 ರ ಸಂಜೆ ಮನೆಗೆ ಹಿಂದಿರುಗಿದ ಅವರು ನಂತರ ಮೂರು ಬಳೆಗಳು ಮತ್ತು ಇತರ ಚಿನ್ನಾಭರಣಗಳನ್ನು ಬಟ್ಟೆಗಳೊಂದಿಗೆ ಸೂಟ್ಕೇಸ್ನಲ್ಲಿ ಇರಿಸಿದ್ದಳು. ಆದರೆ, ಆಗಸ್ಟ್ 27ರ ಸಂಜೆ ಸೂಟ್ಕೇಸ್ ತೆರೆದಾಗ ಚಿನ್ನಾಭರಣಗಳು ನಾಪತ್ತೆಯಾಗಿದ್ದವು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.