ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಕುಂದಾಪುರ: ಸೂಟ್‌ಕೇಸ್‌ನಲ್ಲಿ ಇರಿಸಿದ್ದ 4.8 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಕುಂದಾಪುರ: ಸೆ.1 ಮನೆಯಲ್ಲಿ ಸೂಟ್‌ಕೇಸ್‌ನಲ್ಲಿ ಇರಿಸಲಾಗಿದ್ದ 100 ಗ್ರಾಂ ತೂಕದ 4.8 ಲಕ್ಷ ಮೌಲ್ಯದ ಮೂರು ಚಿನ್ನದ ಬಳೆಗಳು ಕಳ್ಳತನವಾದ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿದ್ದಾಪುರ ನಿವಾಸಿ ಮರಿಯಮ್ ಶಹರಿನ್ (26) ಅವರು ಈ ಕುರಿತು ದೂರು ದಾಖಲಿಸಿದ್ದಾರೆ. ಆಗಸ್ಟ್ 22 ರಂದು ಗುಲ್ವಾಡಿ ಗ್ರಾಮದ ಶೆಟ್ರಕಟ್ಟೆಯ ಕಲ್ಕಂಬದಲ್ಲಿರುವ ತನ್ನ ಮಾವ ಮಹಮ್ಮದ್ ಖಾಸಿಂ ಅವರ ಮನೆಗೆ ಗೃಹಪ್ರವೇಶ ಮತ್ತು ಮದುವೆಗೆಂದು ತೆರಳಿದ್ದರು. ಆಗಸ್ಟ್ 26 ರ ಸಂಜೆ ಮನೆಗೆ ಹಿಂದಿರುಗಿದ ಅವರು ನಂತರ ಮೂರು ಬಳೆಗಳು ಮತ್ತು ಇತರ ಚಿನ್ನಾಭರಣಗಳನ್ನು ಬಟ್ಟೆಗಳೊಂದಿಗೆ ಸೂಟ್‌ಕೇಸ್‌ನಲ್ಲಿ ಇರಿಸಿದ್ದಳು. ಆದರೆ, ಆಗಸ್ಟ್ 27ರ ಸಂಜೆ ಸೂಟ್‌ಕೇಸ್ ತೆರೆದಾಗ ಚಿನ್ನಾಭರಣಗಳು ನಾಪತ್ತೆಯಾಗಿದ್ದವು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

kiniudupi@rediffmail.com

No Comments

Leave A Comment