ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಪೆಟ್ರೋಲ್ ಸೋರಿಕೆಯಾಗಿ ಟ್ಯಾಂಕರ್ ಸ್ಫೋಟ – 25 ಮಂದಿ ಸಾವು, 40 ಜನರಿಗೆ ಗಾಯ

ಹೈತಿ,ಸೆ.15,ಹೈತಿಯ ದಕ್ಷಿಣ ಪೆನಿನ್ಸುಲಾದ ರಸ್ತೆಯೊಂದರಲ್ಲಿ ಪೆಟ್ರೋಲ್ ಸೋರಿಕೆಯಾದ ಟ್ಯಾಂಕರ್ ಟ್ರಕ್ ಸ್ಫೋಟಗೊಂಡು 15 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.ಸುಮಾರು 40 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮಧ್ಯರಾತ್ರಿ ಪೆಟ್ರೋಲ್ ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾದ ನಂತರ ಟ್ಯಾಂಕರ್ ಸ್ಫೋಟಗೊಂಡಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಸುಮಾರು 20 ಮನೆಗಳೂ ಸುಟ್ಟು ಕರಕಲಾಗಿದೆ.

ಟ್ಯಾಂಕರ್ ಪಲ್ಟಿಯಾದ ನಂತರ ಕೆಲವರು ರಸ್ತೆಯಲ್ಲಿ ಸುರಿದ ಪೆಟ್ರೋಲ್ ಸಂಗ್ರಹಿಸಲು ಓಡಿದರು. ಈ ಸಂದರ್ಭದಲ್ಲಿ ಇಂಧನ ಟ್ಯಾಂಕರ್‌ನಲ್ಲಿ ಸ್ಫೋಟ ಸಂಭವಿಸಿದೆ. ಬೆಂಕಿ ವೇಗವಾಗಿ ಹರಡಿದೆ.ಈ ಕಾರಣದಿಂದಾಗಿ ಜನರು ಸಜೀವ ದಹನವಾಗಿದ್ದಾರೆ ಎಂದು ಹೇಳಲಾಗಿದೆ.

No Comments

Leave A Comment