ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಬಿಸಿಲಿನ ಝಳ ತಾಳಲಾರದೆ ದುಬೈನಲ್ಲಿ ವಾಸವಾಗಿದ್ದ ಕುಂದಾಪುರ ಮೂಲದ ಯುವಕ ಸಾವು
ಕುಂದಾಪುರದ ವಿಠಲವಾಡಿ ನಿವಾಸಿ ಯುವಕ ಶಾನ್ ಡಿಸೋಜಾ (19 ವರ್ಷ) ಮೃತ ದುರ್ದೈವಿ. ದುಬೈಯಿಂದ ಸುಮಾರು 115 ಕಿ.ಮೀ. ದೂರದಲ್ಲಿರುವ ರಾಸ್ ಅಲ್ ಖೈಮಾದ ಸೈಂಟ್ ಮೆರೀಸ್ ಚರ್ಚ್ ಬಳಿ ಮನೆಯಲ್ಲಿ ವಾಸವಾಗಿದ್ದರು. ಖಾಸಗಿ ಕಂಪೆನಿಯಲ್ಲಿ ಮ್ಯಾನೆಜರ್ ಆಗಿದ್ದ ಶಾನ್, ಅಲ್ಲಿಯೇ ಕಾಲೇಜು ವಿದ್ಯಾಭ್ಯಾಸ ಮಾಡುತ್ತಿದ್ದರು. ಬಿಸಿಲಿನ ತಾಪ ಮೂರ್ಚೆ ಹೋಗಿ ಆರ್ಎಕೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ರವಿವಾರ ಮೃತರಾಗಿದ್ದಾರೆ.
ಯುವಕ ಶಾನ್ ಡಿಸೋಜಾ ಅವರಿಗೆ ತಂದೆ, ತಾಯಿ ಮತ್ತು ಇಬ್ಬರು ಸಹೋದರರು ಇದ್ದಾರೆ.