ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ವಿಭಿನ್ನ ಸನ್ನಿವೇಶಕ್ಕೆ ಸಾಕ್ಷಿಯಾದ ಬಂಟ್ವಾಳ: ಒಂದಡೆ ಉದ್ವಿಗ್ನ, ಮತ್ತೊಂದಡೆ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು

ಮಂಗಳೂರು, ಸೆಪ್ಟೆಂಬರ್​​ 16: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ  ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಒಂದು ಕಡೆ ಬಂಟ್ವಾಳ ತಾಲೂಕಿ ಬಿಸಿ ರೋಡ್ ​ನಲ್ಲಿ ಹಿಂದೂ-ಮುಸ್ಲಿಮರ ಹೇಳಿಕೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮತ್ತೊಂದು ಕಡೆ ಇದೇ ಬಂಟ್ವಾಳ ತಾಲೂಕಿನ ಮಾಣಿ ಜಂಕ್ಷನ್ ಮತ್ತು ಕೊಡಾಜೆಯಲ್ಲಿ ಮುಸ್ಲಿಂ ಬಾಂಧವರಿಗೆ ಹಿಂದೂಗಳು ಸಿಹಿ, ಐಸ್​​ಕ್ರೀಂ, ನೀರಿನ ಬಾಟಲಿ ವಿತರಣೆ ಮಾಡಿ ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ.

ಮಾಣಿ ಜಂಕ್ಷನ್​​ನಲ್ಲಿ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಕೇಸರಿ ಶಾಲು‌ ಹಾಕಿಕೊಂಡು ಹಿಂದೂ ಯುವಕರು ಮುಸ್ಲಿಂ ಮುಖಂಡರು ಮತ್ತು ಮಕ್ಕಳಿಗೆ ಸಿಹಿ, ಐಸ್​ಕ್ರೀಂ, ನೀರಿನ ಬಾಟಲ್ ವಿತರಣೆ ಮಾಡಿದರು. ಈ ಮಾಣಿ ಜಂಕ್ಷನ್​ನಲ್ಲಿ ಬಿಸಿ ರೋಡ್​ ಕೇವಲ 20 ಕಿಮೀ ದೂರದಲ್ಲಿದೆ.

ಕೊಡಾಜೆಯಲ್ಲೂ ಕೂಡ ಹಿಂದೂಗಳು ಈದ್​ ಮಿಲಾದ್​ ಮೆರವಣಿಗೆಯಲ್ಲಿದ್ದ ಮುಸ್ಲಿಮರಿಗೆ ಸಿಹಿ ಹಂಚಿದರು. ಜುಮ್ಮಾ ಮಸೀದಿಯಿಂದ ಬಂದಿದ್ದ ಈದ್ ಮಿಲಾದ್ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಮುಸ್ಲಿಂ ಬಾಂಧವರಿಗೆ ಹಿಂದೂಗಳು ಸ್ವೀಟ್ ಬಾಕ್ಸ್ ವಿತರಿಸಿ ಹಬ್ಬದ ಶುಭಾಶಯ ಕೋರಿದರು.

kiniudupi@rediffmail.com

No Comments

Leave A Comment