ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ

ಬೆಂಗಳೂರು: ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ, ಅಂದು ವಿರೋಧ ಪಕ್ಷ ಸ್ಥಾನದಲ್ಲಿದ್ದ ಕಾಂಗ್ರೆಸ್ ‘ಪೇ ಸಿಎಂ’ ಅಭಿಯಾನ ನಡೆಸಲು ಕಾರಣವಾಗಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇಂದು ಗುರುವಾರ ನಿಧನರಾಗಿದ್ದಾರೆ.

ಹೊಸಕೋಟೆಯ ಅವರ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣನವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ವಾಪಸ್ಸಾಗಿದ್ದರು. ಆದರೆ ಇಂದು ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಗೂ ಪತ್ರ ಬರೆದು ಸಂಚಲನ ಸೃಷ್ಟಿಸಿದ್ದರು. ಅಷ್ಟೇ ಅಲ್ಲದೆ, ಈಗಿನ ಕಾಂಗ್ರೆಸ್‌ ಸರ್ಕಾರದ ವಿರುದ್ಧವೂ ಕೂಡ ಕವಿಷನ್‌ ಆರೋಪ ಮಾಡಿದ್ದರು. ರಾಜ್ಯದ ಗುತ್ತಿಗೆದಾರರ ಪರ ಹೋರಾಟ ನಡೆಸಿಕೊಂಡು ಬಂದಿದ್ದರು.

ಕೆಂಪಣ್ಣನವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ ಎಂದು ಸಂತಾಪದಲ್ಲಿ ತಿಳಿಸಿದ್ದಾರೆ.

kiniudupi@rediffmail.com

No Comments

Leave A Comment