ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

MUDA Case:’ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಬಹು ದೊಡ್ಡ ಉತ್ತೇಜನ’; ಹೈಕೋರ್ಟ್ ತೀರ್ಪು ಕುರಿತು ಟಿಜೆ ಅಬ್ರಹಾಂ ಪ್ರತಿಕ್ರಿಯೆ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಬಹಳ ದೊಡ್ಡ ಉತ್ತೇಜನ ಸಿಕ್ಕಂತಾಗಿದೆ ಎಂದು ಭ್ರಷ್ಟಾಚಾರ ವಿರೋಧಿ ಆಂದೋಲನ ಹೋರಾಟಗಾರ ಟಿಜೆ ಅಬ್ರಹಾಂ ಹೇಳಿದ್ದಾರೆ.

ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಭೀತಿ ಎದುರಿಸುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ಆಘಾತ ನೀಡಿದ್ದು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕೊನೆಗೂ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ವಿಭಾಗೀಯ ಪೀಠ ವಜಾಗೊಳಿಸಿದೆ.

ತೀರ್ಪು ಪ್ರಕಟಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅರ್ಜಿದಾರರಾದ ಟಿ.ಜೆ.ಅಬ್ರಹಾಂ, ‘ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಸುಪ್ರೀಂಕೋರ್ಟ್‌ನಲ್ಲೂ ಕೇವಿಯಟ್‌ ಸಲ್ಲಿಸಿದ್ದೇವೆ. ಹೈಕೋರ್ಟ್‌ ನಮ ವಾದಕ್ಕೆ ಮತ್ತು ಆಕ್ಷೇಪಣೆಗಳಿಗೆ ಮನ್ನಣೆ ನೀಡಿದೆ. ರಾಜ್ಯಪಾಲರ ಪೂರ್ವಾನುಮತಿ ಸರಿಯಿಲ್ಲ ಎಂದು ವಾದ ಮಾಡುವುದು ಅವರ ಹಕ್ಕಾಗಿತ್ತು. ಆದರೆ ಹೈಕೋರ್ಟ್‌ ಅದನ್ನು ಮಾನ್ಯ ಮಾಡಿಲ್ಲ ಎಂದರು.

ಅಂತೆಯೇ ತೀರ್ಪು ಸ್ವಾಗತಾರ್ಹ. ಇದನ್ನು ಪ್ರಶ್ನಿಸಿ ಮೇಲನವಿ ಸಲ್ಲಿಸುವ ಎಲ್ಲಾ ಹಕ್ಕುಗಳೂ ಅರ್ಜಿದಾರರಿಗಿವೆ. ಈಗಾಗಲೇ ನಾವು ಸುಪ್ರೀಂಕೋರ್ಟ್‌ನಲ್ಲಿ ಕೇವಿಯಟ್‌ ಸಲ್ಲಿಸಿದ್ದೇವೆ. ಹೈಕೋರ್ಟ್‌ನ ವಿಭಾಗೀಯ ಪೀಠದ ಮುಂದೆಯೂ ಕೇವಿಯಟ್‌ ಸಲ್ಲಿಸುತ್ತೇವೆ. ಮುಡಾ ಪ್ರಕರಣದ ವಿಚಾರಣೆಗೆ ಯಾವುದೇ ಅಡೆತಡೆ ಇರಲಿಲ್ಲ. ಹೈಕೋರ್ಟ್‌ ವಿಚಾರಣೆಯಿಂದಾಗಿ ಒಂದಿಷ್ಟು ಕಾಲ ಮುಂದೂಡಿಕೆಯಾಗಿತ್ತು. ಈಗ ತೀರ್ಪಿನಿಂದಾಗಿ ಎಲ್ಲವೂ ಇತ್ಯರ್ಥವಾಗಿದೆ ಎಂದರು.

No Comments

Leave A Comment