ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಬ್ರಹ್ಮಾವರ: ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಘಟಕದ ಅಧ್ಯಕ್ಷರಾಗಿ ಸ್ಟ್ಯಾನಿ ಡಿಸೋಜ ಆಯ್ಕೆ
ಬ್ರಹ್ಮಾವರ: ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಬ್ರಹ್ಮಾವರ ತಾಲೂಕು ಘಟಕ ಅಧ್ಯಕ್ಷರಾಗಿ ಸ್ಟ್ಯಾನಿ ಡಿಸೋಜ ಯವರನ್ನು ಕರ್ನಾಟಕ ರಕ್ಷಣಾ ವೇದಿಕೆ ಬ್ರಹ್ಮಾವರ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಆಯ್ಕೆಯಾದ ಸ್ಟ್ಯಾನಿ ಡಿಸೋಜರವರನ್ನು ಕರ್ನಾಟಕ ರಕ್ಷಣಾ ವೇದಿಕೆಯಾ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿರವರು ಸಂಘಟನೆಯ ಶಾಲು ಹೊದಿಸಿ ಹೂ ಗುಚ್ಛ ನೀಡಿ ಅಭಿನಂದಿಸಿದರು. ಜಿಲ್ಲಾ ಪದಾಧಿಕಾರಿಗಳದ ಗೌರರಾಧ್ಯಕ್ಷರಾದ ಸುಂದರ. ಎ ಬಂಗೇರ. ಮಹಿಳಾ ಜಿಲ್ಲಾಧ್ಯಕ್ಷರು ಗೀತ ಪಾಂಗಳ. ಜಿಲ್ಲಾ ಸಲಹೆಗಾರರು ಪ್ರಕಾಶ್ ದೇವಾಡಿಗ. ಜಿಲ್ಲಾ ಸಂಸ್ಕೃತ ಕಾರ್ಯದರ್ಶಿ ಕಾರ್ಯದರ್ಶಿಯ ಕೃಷ್ಣ ಕುಮಾರ್. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗೋಪಾಲ್ ದೊರೆ. ಜಿಲ್ಲಾ ಮಹಿಳಾ ಉಪಾಧ್ಯಕ್ಷರು ದೇವಕಿ ಬಾರ್ಕೂರು. ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಜ್ಯೋತಿ. ಉಪಸ್ಥಿತರಿದ್ದರು.