ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಭೀಕರ ಬೆಂಕಿ ಅವಘಡ
ಕೃಷ್ಣಗಿರಿ: ತಮಿಳುನಾಡಿನ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು,7 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸುವ ಕಾರ್ಯ ಮಾಡಲಾಗುತ್ತಿದೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಬಳಿಯ ಟಾಟಾ ಇಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ (TEPL) ಸೌಲಭ್ಯದಲ್ಲಿ ಶನಿವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ನಾಗಮಂಗಲಂ ಸಮೀಪದ ಉದ್ದಾನಪಲ್ಲಿಯಲ್ಲಿರುವ ಕಂಪನಿಯ ಮೊಬೈಲ್ ಫೋನ್ ಬಿಡಿಭಾಗಗಳ ಪೇಂಟಿಂಗ್ ಘಟಕದಲ್ಲಿ ಬೆಳಿಗ್ಗೆ 5:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಅಗ್ನಿ ಅವಘಡ ಬೆನ್ನಲ್ಲೇ ಇಡೀ ಘಟಕದ ತುಂಬ ದಟ್ಟ ಹೊಗೆ ಆವರಿಸಿದ್ದು, ಕಾರ್ಮಿಕರು ಹಾಗೂ ಸ್ಥಳೀಯರಲ್ಲಿ ಭೀತಿ ಆವರಿಸಿದೆ. ಎಲ್ಲಾ ಉದ್ಯೋಗಿಗಳನ್ನು ಆವರಣದಿಂದ ಸ್ಥಳಾಂತರಿಸಲಾಗಿದ್ದು, ವಿಚಾರ ತಿಳಿದ ಕೂಡಲೇ ಏಳು ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ.
ದುರ್ಘಟನೆಯಲ್ಲಿ ಈ ವರೆಗೂ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ.ಮೂಲಗಳ ಪ್ರಕಾರ ಘಟನೆಯ ಸಮಯದಲ್ಲಿ, ಮೊದಲ ಪಾಳಿಯಲ್ಲಿ ಸುಮಾರು 1,500 ಕಾರ್ಮಿಕರು ಕರ್ತವ್ಯದಲ್ಲಿದ್ದರು ಎಂದು ಹೇಳಲಾಗಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.