ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಮೂಡಬಿದಿರೆ: ಡಿ. 10ರಿಂದ 15ರವರೆಗೆ ಆಳ್ವಾಸ್ ವಿರಾಸತ್

ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಡಿ.10ರಿಂದ 15ರವರೆಗೆ ಆಳ್ವಾಸ್ ವಿರಾಸತ್ 2024, 30ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ‌ಉತ್ಸವ ನಡೆಯಲಿದೆ ಎಂದು ಆಳ್ವಾಸ್ ಅಧ್ಯಕ್ಷ‌ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೊದಲ 5 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತು‌ ಸಹಿತ‌ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು, ಕೊನೆಯ ದಿನ ಕೇವಲ ವಸ್ತು ಪ್ರದರ್ಶನಗಳಿಗಾಗಿಯೇ ಮೀಸಲಿಡಲಾಗಿದೆ. ಸಾರ್ವಜನಿಕರಿಗೆ ಸಂಪೂರ್ಣ ಉಚಿತ ಪ್ರವೇಶವಿದ್ದು, ಸಂಸ್ಕೃತಿ ಪ್ರಿಯರೂ, ಕಲಾಪ್ರೇಮಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

No Comments

Leave A Comment