ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಸ್ವಚ್ಛ ಭಾರತ್ ಅಭಿಯಾನಕ್ಕೆ ಉಡುಪಿ ಪರ್ಯಾಯ ಶ್ರೀಗಳಿ೦ದ ಚಾಲನೆ

ಉಡುಪಿ:ಪರ್ಯಾಯ ಶ್ರೀ ಪುತ್ತಿಗೆಮಠ ಶ್ರೀಕೃಷ್ಣ ಮಠ, ಉಡುಪಿ ಹಾಗೂ ಪತಂಜಲಿ ಯೋಗ ಸಮಿತಿ ಉಡುಪಿ ಜಿಲ್ಲೆ ಇದರ ಸಹಯೋಗದೊಂದಿಗೆ ಶ್ರೀಕೃಷ್ಣಮಠದ ಮುಖ್ಯದ್ವಾರದಬಳಿ ಪರಮಪೂಜ್ಯ ಪರ್ಯಾಯ ಶ್ರೀಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿದರು.

ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯೆ ಮಾನಸ ಪೈ,ಮಠದ ದಿವಾನರಾದ ನಾಗರಾಜ ಆಚಾರ್ಯ, ರಮಣ ಆಚಾರ್ಯ,ಹಾಗೂ ಪತಂಜಲಿ ಯೋಗ ಸಮಿತಿಯ ಅಧ್ಯಕ್ಷ ರಾಘವೇಂದ್ರ ಭಟ್, ಪ್ರಭಾರಿಗಳವರಾದ ವೆಂಕಟೇಶ್ ಮೆಹಂದಲೆ,ಜಗದೀಶ ಕುಮಾರ್, ಹರಿಪ್ರಸಾದ ಕೆ, ನಾಗರಾಜ್ ಶೇಟ್,ಡಿ.ಟಿ.ಅಮೀನ್,ಗಿರೀಶ್, ಶ್ರೀಪತಿ ಭಟ್,ಲಕ್ಷ್ಮೀ ಸುವರ್ಣ ಹಾಗೂ ಸದಸ್ಯರು ಉಪಸ್ಥಿತರಿದ್ದರು.

No Comments

Leave A Comment