ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಇಸ್ರೇಲ್ ಮೇಲೆ ಇರಾನ್‌ ಕ್ಷಿಪಣಿ ದಾಳಿ- ಸಂಕಷ್ಟದಲ್ಲಿ ಕನ್ನಡಿಗರು

ಇಸ್ರೇಲ್ ಮೇಲೆ ಕ್ಷಿಪಣಿಗಳ ಮೂಲಕ ಇರಾನ್‌ ದಾಳಿ ನಡೆಸಿದ ಬೆನ್ನಲ್ಲೇ ವಿಮಾನ ಪ್ರಯಾಣಿಕರಿಗೆ ಸಂಕಷ್ಟ ಎದುರಾಗಿದೆ.ಸ್ವಿಜರ್ಲ್ಯಾಂಡ್ ರಾಜಧಾನಿ ಜ್ಯೂರಿಕ್‌ನಿಂದ ದುಬೈಗೆ ಬಂದು ದುಬೈನಿಂದ ಬೆಂಗಳೂರಿಗೆ ಕನ್ನಡಿಗರು ಬರುತ್ತಿದ್ದರು. ಈ ವೇಳೆ ಇರಾನ್‌ ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ.

ಕ್ಷಿಪಣಿ ದಾಳಿಯ ಬೆನ್ನಲ್ಲೇ ವಿಮಾನವನ್ನು ಟರ್ಕಿಯ ಇಸ್ತಾಂಬುಲ್‌ನಲ್ಲಿ ಲ್ಯಾಂಡ್‌ ಮಾಡಲಾಗಿದೆ. ಕ್ಷಿಪಣಿ ದಾಳಿಯಿಂದ ಕರ್ನಾಟಕದ ಪ್ರಯಾಣಿಕರ ಜೊತೆ ಸುಮಾರು 300 ಮಂದಿ ಪ್ರಯಾಣಿಕರು ವಿಮಾನದಲ್ಲಿ ಇದ್ದಾರೆ.

ಜ್ಯೂರಿಕ್‌ ಕಾಲಮಾನ ಮಧ್ಯಾಹ್ನ 3:25ಕ್ಕೆ ಟೇಕಾಫ್‌ ಆದ ವಿಮಾನ ರಾತ್ರಿ10 ಗಂಟೆಗೆ ದುಬೈ ತಲುಪಬೇಕಿತ್ತು. ಸದ್ಯ ಇರಾನ್‌ ಮತ್ತು ಇರಾಕ್‌ ವಾಯುಸೀಮೆ ಬಂದ್‌ ಆಗಿದ್ದು ಯಾವುದೇ ವಿಮಾನ ಹಾರಾಟ ನಡೆಸುತ್ತಿಲ್ಲ.

No Comments

Leave A Comment