ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಮುಂಬೈ: ಅಂಗಡಿ ಮತ್ತು ವಸತಿ ಸಮುಚ್ಚಯದಲ್ಲಿ ಬೆಂಕಿ, 7 ಮಂದಿ ಸಾವು

ಮುಂಬೈ: ವಾಣಿಜ್ಯ ನಗರಿ ಮುಂಬೈನ ಚೆಂಬೂರ್ ನಲ್ಲಿ ಎರಡು ಅಂತಸ್ತಿನ ಅಂಗಡಿ ಮತ್ತು ವಸತಿ ಕಟ್ಟಡದಲ್ಲಿ ಭಾನುವಾರ ಬೆಳಗ್ಗೆ ಅಗ್ನಿ ಅವಘಡ ಉಂಟಾಗಿ ಏಳು ವರ್ಷದ ಬಾಲಕಿ ಸೇರಿದಂತೆ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚೆಂಬೂರ್ ಪ್ರದೇಶದ ಸಿದ್ಧಾರ್ಥ್ ಕಾಲೋನಿಯಲ್ಲಿ ಇಂದು ಮುಂಜಾನೆ 5.20ರ ಸುಮಾರಿಗೆ ಈ ಘಟನೆ ನಡೆದಿದೆ. ಕಟ್ಟಡದ ನೆಲ ಮಹಡಿಯನ್ನು ಅಂಗಡಿಯಾಗಿ ಮತ್ತು ಮೇಲಿನ ಮಹಡಿಯನ್ನು ನಿವಾಸವಾಗಿ ಬಳಸಲಾಗಿತ್ತು.

ನೆಲ ಮಹಡಿಯಲ್ಲಿನ ಅಂಗಡಿಯಲ್ಲಿನ ವಿದ್ಯುತ್ ವೈರಿಂಗ್ ಮತ್ತು ಇನ್ಸ್ಟಾಲೇಷನ್ ನಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ಮೇಲಿನ ಮಹಡಿಗೆ ವ್ಯಾಪಿಸಿತು, ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದರು, ಕೂಡಲೇ ಅವರನ್ನು ರಾಜವಾಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಲ್ಲಿ ಅವರೆಲ್ಲರೂ ಮೃತಪಟ್ಟರು.

ಮೃತರನ್ನು ಪ್ಯಾರಿಸ್ ಗುಪ್ತಾ (7ವ), ಮಂಜು ಪ್ರೇಮ್ ಗುಪ್ತಾ (30ವ), ಅನಿತಾ ಗುಪ್ತಾ (39ವ), ಪ್ರೇಮ್ ಗುಪ್ತಾ (30ವ) ಮತ್ತು ನರೇಂದ್ರ ಗುಪ್ತಾ (10ವ) ಎಂದು ಗುರುತಿಸಲಾಗಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಇನ್ನೂ ತಿಳಿದುಬಂದಿಲ್ಲ.

kiniudupi@rediffmail.com

No Comments

Leave A Comment