ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಸುಳ್ಯ : ತಪಾಸಣೆಗೆಂದು ಕರೆತಂದ ಕೈದಿ ಪರಾರಿ
ಸುಳ್ಯ ಸರಕಾರಿ ಆಸ್ಪತ್ರೆಗೆ ತಪಾಸಣೆಗೆಂದು ಕರೆತಂದ ಕೈದಿಯೊರ್ವ ಪರಾರಿಯಾದ ಘಟನೆ ನಡೆದಿದೆ.
ಕೈದಿ ಓರ್ವನನ್ನು ಆರೋಗ್ಯ ತಪಾಸಣೆ ಮಾಡಿಸಲು ಆಸ್ಪತ್ರೆಗೆ ಇಬ್ಬರು ಪೊಲೀಸ್ ಸಿಬ್ಬಂದಿ ಕರೆ ತಂದಿದ್ದು ಈ ವೇಳೆ ಓರ್ವ ಪೊಲೀಸ್ ಚೀಟಿ ಮಾಡಿಸುವ ಸಂದರ್ಭದಲ್ಲಿ ಕೈದಿ ತಪ್ಪಿಸಿಕೊಂಡಿದ್ಧಾನೆ.
ತನ್ನ ಕೈಯಲ್ಲಿ ಇದ್ದ ಕೋಳದೊಂದಿಗೆ ಎಸ್ಕೆಪ್ ಆಗಿದ್ದು ಇದೀಗ ಪೊಲೀಸ್ ಅಧಿಕಾರಿಗಳು ಹುಡುಕಾಟ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.