ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಪಾರ್ಸಿ ಬದಲಿಗೆ ಹಿಂದೂ ಸಂಪ್ರದಾಯದಂತೆ ರತನ್ ಟಾಟಾ ಅಂತಿಮ ಸಂಸ್ಕಾರ

ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅಕ್ಟೋಬರ್ 9 ರಂದು ತಮ್ಮ 86 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಅವರ ಅಂತಿಮ ಸಂಸ್ಕಾರ ಇಂದು ಸಂಜೆ 4 ಗಂಟೆಗೆ ನೆರವೇರಲಿದೆ.

ಟಾಟಾ ಅವರ ಪಾರ್ಥಿವ ಶರೀರವನ್ನು ನಾರಿಮನ್ ಪ್ಲಾಂಟ್‌ನಲ್ಲಿರುವ ಎನ್‌ಸಿಪಿಎ ಲಾನ್‌ನಲ್ಲಿ ಬೆಳಗ್ಗೆ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ರತನ್ ಟಾಟಾ ಅವರು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿದ್ದು, ಪಾರ್ಸಿ ಆಚರಣೆಗಳ ಬದಲಿಗೆ ಹಿಂದೂ ಸಂಪ್ರದಾಯಗಳ ಪ್ರಕಾರ ಅವರ ಅಂತಿಮ ವಿಧಿಗಳನ್ನು ನಡೆಸಲಾಗುವುದು. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಮೃತ ದೇಹಗಳನ್ನು ಸುಡುವ ವಿಧಾನಗಳಲ್ಲಿ ಬದಲಾವಣೆಗಳಾಗಿರುವುದು ಇದಕ್ಕೆ ಕಾರಣ ಎಂದು ಹೇಳಲಾಗಿದೆ.

ಪಾರ್ಸಿ ಸಮುದಾಯದಲ್ಲಿ ಅಂತ್ಯಕ್ರಿಯೆಯ ನಿಯಮಗಳು ವಿಭಿನ್ನ, ಪಾರ್ಸಿ ಧರ್ಮದಲ್ಲಿ, ಸಾವಿನ ನಂತರ, ಟವರ್ ಆಫ್ ಸೈಲೆನ್ಸ್ ಅಥವಾ ದಖ್ಮಾ ಎಂದು ಕರೆಯಲ್ಪಡುವ ಸಾಂಪ್ರದಾಯಿಕ ಸ್ಮಶಾನದಲ್ಲಿ ರಣಹದ್ದುಗಳು ತಿನ್ನಲು ದೇಹವನ್ನು ತೆರೆದ ಸ್ಥಳದಲ್ಲಿ ಬಿಡಲಾಗುತ್ತದೆ. ಈಗ ಸೈಲೆನ್ಸ್ ಗೋಪುರಕ್ಕೆ ಸರಿಯಾದ ಸ್ಥಳದ ಕೊರತೆ ಮತ್ತು ಹದ್ದು, ರಣಹದ್ದುಗಳಂತಹ ಪಕ್ಷಿಗಳ ಕೊರತೆಯಿಂದಾಗಿ, ಕಳೆದ ಕೆಲವು ವರ್ಷಗಳಿಂದ, ಪಾರ್ಸಿ ಜನರು ತಮ್ಮ ಅಂತ್ಯಕ್ರಿಯೆಯ ವಿಧಾನವನ್ನು ಬದಲಾಯಿಸಲು ಪ್ರಾರಂಭಿಸಿದ್ದಾರೆ. ಆದುದರಿಂದ ರತನ್ ಟಾಟಾ ಅವರ ಅಂತಿಮ ವಿಧಿವಿಧಾನಗಳು ಕೂಡ ಹಿಂದೂ ಸಂಪ್ರದಾಯದಂತೆ ನಡೆಯಲಿದೆ.

kiniudupi@rediffmail.com

No Comments

Leave A Comment