ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನಗೆ ಕೊನೆಗೂ ಜಾಮೀನು

ಬೆಂಗಳೂರು: ದಲಿತ ಸಮುದಾಯದ ಗುತ್ತಿಗೆದಾರನಿಗೆ ಬೆದರಿಕೆ, ಜಾತಿನಿಂದನೆ ಪ್ರಕರಣದಲ್ಲಿ ಜೈಲು ಸೇರಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಇದೀಗ ಅತ್ಯಾಚಾರ ಪ್ರಕರಣದಲ್ಲೂ ಬಿಗ್ ರಿಲೀಫ್​ ಸಿಕ್ಕಿದೆ.

ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನಗೆ ಕೋರ್ಟ್ ಜಾಮೀನು ನೀಡಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಮಂಗಳವಾರ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದ ಬೆಂಗಳೂರು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್‌ ಗಜಾನನ ಭಟ್‌ ಅವರು ಮುನಿರತ್ನಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ.

ಪೊಲೀಸರ ತನಿಖೆಗೆ ಸಹಕಾರ ನೀಡುವುದು, ಸಾಕ್ಷಿಗಳನ್ನು ನಾಶಪಡಿಸದಿರುವುದು, ಸಾಕ್ಷ್ಯಾಧಾರರ ಮೇಲೆ ಪ್ರಭಾವ ಬೀರದಿರುವುದು, ಇಬ್ಬರ ಶ್ಯೂರಿಟಿ ಮೇಲೆ ಜಾಮೀನನ್ನು ಮಂಜೂರು ಮಾಡಿದ್ದಾರೆ.

ಅಂದಹಾಗೆ ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್‌‍ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಆಧಾರದ ಮೇಲೆ ಎಸ್‌‍ಐಟಿ ಅಧಿಕಾರಿಗಳು ಮುನಿರತ್ನ ಅವರನ್ನು ಬಂಧಿಸಿದ್ದರು. ತಮನ್ನು ಮುನಿರತ್ನ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತ ಮಹಿಳೆಯೊಬ್ಬರು ದೂರು ನೀಡಿದ್ದರು.

ಈ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌‍ಐಟಿಗೆ ವಹಿಸಿತ್ತು. ಬಿಬಿಎಂಪಿ ಗುತ್ತಿಗೆದಾರರೊಬ್ಬರಿಗೆ ಜಾತಿ ನಿಂದನೆ, ಪ್ರಾಣ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ ನ್ಯಾಯಾಲಯ ಅವರಿಗೆ ಜಾಮೀನು ನೀಡಿತ್ತು. ಆದರೆ ಮಹಿಳೆ ನೀಡಿದ ದೂರಿನನ್ವಯ ಎಸ್‌‍ಐಟಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬರುತ್ತಿದ್ದಂತೆ ಮುನಿರತ್ನ ಅವರನ್ನು ಬಂಧಿಸಿದ್ದರು.

No Comments

Leave A Comment