ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಷೇರು ಟ್ರೇಡಿಂಗ್ ಹೆಸರಿನಲ್ಲಿ ಹಣ ಹೂಡಿಕೆ ಮಾಡಿಸಿ 97 ಕೋಟಿ ರೂಪಾಯಿ ವಂಚನೆ : ಆ್ಯಕ್ಸಿಸ್ ಬ್ಯಾಂಕ್ ನೌಕರರು ಸೇರಿ ಒಟ್ಟು 8 ಮಂದಿ ಸಿಸಿಬಿ ಬಲೆಗೆ
ಬೆಂಗಳೂರು : ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆಯಲ್ಲಿ ಆ್ಯಕ್ಸಿಸ್ ಬ್ಯಾಂಕ್ನ ನೌಕರರು ಸೇರಿ ಒಟ್ಟು 8 ಜನರು ಬಂಧನಕ್ಕೊಳಗಾಗಿದ್ದಾರೆ. ವಿಐಪಿ ಷೇರು ಟ್ರೇಡಿಂಗ್ ಹೆಸರಿನಲ್ಲಿ ಹಣ ಹೂಡಿಕೆ ಮಾಡಿಸಿ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ.
ಬೆಂಗಳೂರಿನ ನಾಗರಭಾವಿ ಆ್ಯಕ್ಸಿಸ್ ಬ್ಯಾಂಕ್ನಲ್ಲಿ ಇಂತಹದೊಂದು ಘಟನೆ ನಡೆದಿದೆ. ಇದೇ ಮೊದಲ ಬಾರಿ ಇಂತಹ ಆರೋಪದಲ್ಲಿ ಬ್ಯಾಂಕ್ ಮ್ಯಾನೆಜರೊಬ್ಬರು ಬಂಧನಕ್ಕೆ ಒಳಗಾಗಿದ್ದಾರೆ.
ಷೇರ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡುವಂತೆ ಹೇಳಿ. ಅವರನ್ನು ನಂಬಿಸಿ ವಂಚಿಸಲಾಗಿದೆ ಎಂಬ ಆರೋಪ ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ಕೇಳಿ ಬಂದಿದೆ. ಅವರ ಮಾತನ್ನು ಕೇಳಿ 1.5 ಕೋಟಿ ರೂಪಾಯಿ ಹಣ ಹೂಡಿಕೆ ಮಾಡಿದ್ದರು ಜನರು ನಂತರ ಷೇರು ಮಾರುಕಟ್ಟೆಯಲ್ಲಿ 28 ಕೋಟಿ ರೂಪಾಯಿ ಲಾಭ ಬಂದಿರುವುದು ಗೊತ್ತಾಗಿ, ಹಣವನ್ನು ವಾಪಸ್ ಪಡೆಯಲು ಹೋಗಿದ್ದಾರೆ.
ಈ ವೇಳೆ 75 ಲಕ್ಷ ರೂಪಾಯಿ ಕೊಡುವಂತೆ ಆರೋಪಿಗಳು ಡಿಮ್ಯಾಂಡ್ ಇಟ್ಟಾಗ, ತಾವು ವಂಚನೆಗೆ ಒಳಗಾಗಿದ್ದೇವೆ ಎಂಬುದು ಜನರಿಗೆ ಗೊತ್ತಾಗಿದೆ. ಇದೇ ವಿಚಾರವಾಗಿ ಸೈಬರ್ ಠಾಣೆಯಲ್ಲಿ ಸುಮಾರು 245 ದೂರುಗಳು ದಾಖಲಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಬ್ಯಾಂಕ್ ಮ್ಯಾನೇಜರ್ ಕಿಶೋರ್, ಸೇಲ್ಸ್ಮೆನ್ ಮನೋಹರ್, ರಾಕೇಶ್ ಕಾರ್ತಿಕ್ ಸೇರಿದಂತೆ ಅಕೌಂಟ್ ಹೋಲ್ಡರ್ ಕೆಂಚೇಗೌಡ, ರಘು, ಲಕ್ಷ್ಮೀಕಾಂತ್, ಮಾಲ ಎಂಬುವವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.