ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಗಾಜಾ ಆಸ್ಪತ್ರೆ ಸುತ್ತುವರೆದು ಇಸ್ರೇಲ್ ದಾಳಿ; ರೋಗಿಗಳು, ವೈದ್ಯಕೀಯ ಸಿಬ್ಬಂದಿಗೆ ಗಾಯ

ಬೈತ್ ಲಹಿಯಾದಲ್ಲಿರುವ ಇಂಡೊನೇಷ್ಯಾ ಆಸ್ಪತ್ರೆಯನ್ನು ಇಸ್ರೇಲ್ ಪಡೆಗಳು ಸುತ್ತುವರೆದು ದಾಳಿ ನಡೆಸಿದ್ದು, ಈ ದಾಳಿಯ ಪರಿಣಾಮ ವೈದ್ಯಕೀಯ ಸಿಬ್ಬಂದಿ ಹಾಗೂ ರೋಗಿಗಳಿಗೆ ಗಾಯಗಳಾಗಿವೆ ಎಂದು ಗಾಜಾದ ವೈದ್ಯಕೀಯ ಅಧಿಕಾರಿಗಳು ಇಂದು ತಿಳಿಸಿದ್ದಾರೆ.

ಇಸ್ರೇಲ್ ಟ್ಯಾಂಕ್‌ಗಳು ಆಸ್ಪತ್ರೆಯನ್ನು ಸುತ್ತುವರಿದು, ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ಎರಡು ಹಾಗೂ ಮೂರನೇ ಮಹಡಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿವೆ. ಈ ದಾಳಿಯಿಂದಾಗಿ ವೈದ್ಯಕೀಯ ಸಿಬ್ಬಂದಿ ಹಾಗೂ ರೋಗಿಗಳು ಭಾರಿ ಅಪಾಯದಲ್ಲಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕ ಮರ್ವಾನ್ ಸುಲ್ತಾನ್ ತಿಳಿಸಿದ್ದಾರೆ.

ದಾಳಿಯ ಪರಿಣಾಮ 40 ರೋಗಿಗಳು ಗಾಯಗೊಂಡಿದ್ದಾರೆ. ವೈದ್ಯಕೀಯ ಸಿಬ್ಬಂದಿಯೂ ಗಾಯಗೊಂಡಿದ್ದಾರೆ ಎಂದು ಗಾಜಾದ ವೈದ್ಯಕೀಯ ಇಲಾಖೆ ಹೇಳಿದೆ.

ಕದನ ವಿರಾಮದ ಒತ್ತಡದ ಹೊರತಾಗಿಯೂ ಉತ್ತರ ಗಾಜಾದಲ್ಲಿ ಇಸ್ರೇಲ್ ಆಕ್ರಮಣ ಮುಂದುವರಿದಿದೆ. ಆದರೆ ಹಮಾಸ್ ಬಂಡುಕೋರರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದೇವೆ ಎಂದು ಇಸ್ರೇಲ್ ತಿಳಿಸಿದೆ.

 

kiniudupi@rediffmail.com

No Comments

Leave A Comment