ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಕಟಪಾಡಿ: ನಿಂತಿದ್ದ ಲಾರಿಗೆ ಟೂರಿಸ್ಟ್ ಬಸ್ ಢಿಕ್ಕಿ : ಹಲವು ಪ್ರವಾಸಿಗರಿಗೆ ಗಂಭೀರ ಗಾಯ
ಕಟಪಾಡಿ: ಟೂರಿಸ್ಟ್ ವಾಹನಯೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಹಲವು ಪ್ರವಾಸಿಗರು ಗಂಭೀರ ಗಾಯಗೊಂಡ ಘಟನೆ ನ. 3 ರಂದು ಭಾನುವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.
ಕೊಲ್ಲೂರು ಪುಣ್ಯಕ್ಷೇತ್ರ ದರ್ಶನಕ್ಕೆ ಹೊರಟಿದ್ದ ಹೊರ ರಾಜ್ಯದ ಪ್ರವಾಸಿಗರ ಮಿನಿ ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದ್ದು, ಮಹಿಳೆಯರೂ ಸೇರಿದಂತೆ ಪ್ರವಾಸಿಗರು ಗಂಭೀರ ಗಾಯಗೊಂಡಿದ್ದಾರೆ.
ಳೀಯರ ಸಹಕಾರದಿಂದ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಟೂರಿಸ್ಟ್ ವಾಹನ ಜಖಂ ಗೊಂಡಿದೆ.
ಈ ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.