ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಡೆಹ್ರಾಡೂನ್​ನಲ್ಲಿ ಭೀಕರ ಕಾರು ಅಪಘಾತ, 6 ಮಂದಿ ಸಾವು

ಉತ್ತರಾಖಂಡದ ಡೆಹ್ರಾಡೂನ್​ನಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ, ಓರ್ವನ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಒಎನ್​ಜಿಸಿ ಕ್ರಾಸಿಂಗ್​ನಲ್ಲಿ ಬೆಳಗಿನ ಜಾವ ಎರಡು ಗಂಟೆ ಸುಮಾರಿಗೆ ಸರಕು ಸಾಗಣೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರು ಮರಕ್ಕೆ ಹೋಗಿ ಡಿಕ್ಕಿ ಹೊಡೆದು ನಜ್ಜುಗುಜ್ಜಾಗಿದೆ.

ದುರಂತವೆಂದರೆ ಇತರ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೋವಾ ಕಾರು ಬಳ್ಳುಪುರದಿಂದ ಕ್ಯಾಂಟ್ ಪ್ರದೇಶದ ಕಡೆಗೆ ಚಲಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಡಿಕ್ಕಿಯು ಎಷ್ಟು ತೀವ್ರವಾಗಿತ್ತು ಎಂದರೆ ಕಂಟೈನರ್​ಗೆ ಡಿಕ್ಕಿಯಾದ ನಂತರ ಕಾರು ತುಂಬಾ ದೂರಕ್ಕೆ ಹಾರಿತ್ತು.

ಘಟನೆ ನಡೆದ ಕೂಡಲೇ ಕ್ಯಾಂಟ್ ಪೊಲೀಸ್ ಠಾಣೆಯ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಪ್ರಯಾಣಿಕರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಪೈಕಿ ಐದು ಮೃತದೇಹಗಳನ್ನು ಡೂನ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಇನ್ನೊಂದು ಮೃತದೇಹವನ್ನು ಮಹಂತ್ ಇಂದ್ರೇಶ್ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರೆಲ್ಲರೂ ವಿದ್ಯಾರ್ಥಿಗಳು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ನಿವಾಸಿ ತೇಜ್ ಪ್ರಕಾಶ್ ಸಿಂಗ್ (19) ಅವರ ಪುತ್ರಿ ಗುನೀತ್.ಜಸ್ವೀರ್ ಕುಕ್ರೇಜಾ (23) ಅವರ ಪುತ್ರ ಕುನಾಲ್, ಪಲ್ಲವ್ ಗೋಯಲ್ ಅವರ ಮಗಳು ನವ್ಯಾ ಗೋಯಲ್,ಸುನಿಲ್ ಅಗರ್ವಾಲ್ ಮಗ ಅತುಲ್ ಅಗರ್ವಾಲ್,ಕುಮಾರ್ ಅಗರ್ವಾಲ್, ರಿಷಬ್ ಜೈನ್ ಮೃತರು.

ಕುಟುಂಬದವರನ್ನು ಸಂಪರ್ಕಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ . ಅಪಘಾತದ ಬಗ್ಗೆ ಮಾಹಿತಿ ಬಂದ ತಕ್ಷಣ ನಗರ ಎಸ್ಪಿ ಪ್ರಮೋದ್ ಕುಮಾರ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. ಸದ್ಯ ಈ ಅಪಘಾತ ಹೇಗೆ ಸಂಭವಿಸಿತು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಘಟನಾ ಸ್ಥಳದ ಸುತ್ತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಸಹ ಪೊಲೀಸರು ಪರಿಶೀಲಿಸಲು ಪ್ರಾರಂಭಿಸಿದ್ದು, ಘಟನೆಯ ಹಿಂದಿನ ನಿಜವಾದ ಕಾರಣವನ್ನು ಕಂಡುಹಿಡಿಯಬಹುದು.

No Comments

Leave A Comment