ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಬಿಸಿ: ರಾಜ್ಯದ ಹಲವಡೆ ದಾಳಿ
ಬೆಂಗಳೂರು, ನವೆಂಬರ್ 12: ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಧಾರವಾಡದ ಮೂರು ಕಡೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಎರಡು, ಗದಗ ಜಿಲ್ಲೆ ನರಗುಂದದಲ್ಲಿ ಒಂದು, ಬೀದರ್, ದಾವಣಗೆರೆ ಮತ್ತು ಮೈಸೂರಿನ ಒಂದು ಕಡೆ ದಾಳಿ ಮಾಡಿ, ಪರೀಶಲನೆ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ರವೀಂದ್ರ ರೊಟ್ಟೆ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಹನುಮಂತ ನೇತೃತ್ವದಲ್ಲಿ ದಾಳಿ ನಡೆದಿದೆ. ರವೀಂದ್ರ ರೊಟ್ಟೆ ಈ ಹಿಂದೆ ಬೀದರ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿರೆಸ್ತಾದಾರ ಹಾಗೂ ಬಿಬಿಎಂಪಿಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ್ ಡವಳೇಶ್ವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ವಿಠ್ಠಲ್ ಡವಳೇಶ್ವರ ಈ ಹಿಂದೆ ಅಕ್ರಮವಾಗಿ 1.10 ಕೋಟಿ ಹಣವನ್ನು ಚಿಕ್ಕೋಡಿಯಿಂದ ಬಾಗಲಕೋಟೆಗೆ ಸಾಗಿಸುವಾಗ ಸಿಕ್ಕಿಬಿದ್ದಿದ್ದರು. ಇದರ ಮುಂದುವರೆದ ಭಾಗವಾಗಿ ದಾಳಿ ನಡೆದಿದೆ ಎನ್ನಲಾಗಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಮೈಸೂರು ನಗರ ಪಾಲಿಕೆಯ ವಲಯ ಆಯುಕ್ತ ನಾಗೇಶ್ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನು, ಶ್ರೀರಂಗಪಟ್ಟಣದಲ್ಲಿರುವ ನಾಗೇಶ್ನ ಮತ್ತೊಂದು ಮನೆ ಮೇಲೂ ಲೋಕಾಯುಕ್ತ ರೇಡ್ ಮಾಡಿದೆ. ನಾಗೇಶ್ ಹಿಂದೆ ಶ್ರೀರಂಗಪಟ್ಟಣ ತಹಶೀಲ್ದಾರ್ ಆಗಿದ್ದರು.
ಧಾರವಾಡದ ಗಾಂಧಿನಗರ ಬಡಾವಣೆಯಲ್ಲಿರುವ ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮನೆ ಎದುರಿನಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಲ್ಲೂ ಪರಿಶೀಲನೆ ನಡೆಸಿದ್ದಾರೆ. ಗೋವಿಂದಪ್ಪ ಭಜಂತ್ರಿಗೆ ಸೇರಿದ ಸವದತ್ತಿ ತಾಲೂಕಿನ ಹೂಲಿ, ಉಗರಗೋಳ ಫಾರ್ಮ್ಹೌಸ್ ಧಾರವಾಡದ ತೇಜಸ್ವಿನಗರ ಬಡಾವಣೆಯ ಅಳಿಯನ ಮನೆ, ಲಕ್ಕಮನಹಳ್ಳಿ ಬಡಾವಣೆ ಕೆಐಎಡಿಬಿ ಕಚೇರಿ ಮೇಲೂ ದಾಳಿ ಮಾಡಿದ್ದಾರೆ. ಹಾಗೇ ನರಗುಂದದಲ್ಲಿರುವ ಸಹೋದರನ ಮನೆ ಮೇಲೂ ಡಿವೈಎಸ್ಪಿ ವೆಂಕನಗೌಡ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆದಿದೆ.
ದಾವಣಗೆರೆಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಸಹಾಯ ನಿರ್ದೇಶಕ ಕಮಲ್ ರಾಜ್ ಮನೆಯ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ದಾವಣಗೆರೆ ನಗರದ ಡಿಸಿಎಂ ಪಕ್ಕದಲ್ಲಿ ಬರುವ ಶಕ್ತಿನಗರದ ಮೂರನೇ ಕ್ರಾಸ್ನಲ್ಲಿ ಕಮಲ್ ರಾಜ್ ಮನೆ ಇದೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತ್ರತ್ವದಲ್ಲಿ ಇನ್ಸ್ ಪೆಕ್ಟರ್ಗಳಾದ ಮಧುಸೂದನ್ ಹಾಗೂ ಪ್ರಭು ಸೇರಿದಂತೆ ಹತ್ತಕ್ಕೂ ಹೆಚ್ಚು ಸಿಬ್ಬಂದಿಗಳಿಂದ ದಾಳಿ ನಡೆದಿದೆ.